Attachment in Detachment ----- Written by Sudha Murti
🔹🔸🔹🔸🔹🔸
When my daughter, the older of my two, wed and left home, I felt a part of me gone.
With a daughter and a son, I know what both mean, differently.
When she was in her teens I felt as if she was my "physical extension" !
So when she left home to set up her own, I felt I lost a limb.
Next time she came to stay with us, I was astonished how her priorities had changed.
We too must've given the same shocks to our own parents !
When she said Amma,
she meant her mother-in-law, not me!
I felt she was always in a hurry to go back to her house and not stay with me for a few more days.
That was the first time, it dawned on me that I have to start practising detachment with attachment.
Two years after my daughter’s marriage, my son left for higher studies to US.
Having experienced a child's separation once, I was better equipped emotionally.
I plunged head long into various classes held in the city starting from vedanta to healing to ikebana -
I just wanted to be away from home..since my husband was a 24/7 workaholic.
My son used to write how he was missing my home cooked food, how he was waiting to come back to live in Chennai with us ...
After a few years, he did come back and we got him married.
He started living separately with his wife and we were also happy that they wanted to be independant from the beginning...
But now, it was all changed !
When in the U S, he missed my cooking, now if I called him to come over with his wife for a meal, it was always some excuse like "oh, amma, we have other plans for the day, please don't mistake us if we don't drop in today" !
I could see that his priorities had also changed completely..
We talk so many things and give so much advice to others, but when it comes to our own children, acceptance comes very late. Our next step is to just leave them undisturbed
in every way.
It was at that time, that I made the following, my 'new profile'.
In all my relationships , rather interactions, I give my best and do my best to live up to what I say.
My attachment with them is complete.
However, I remain detached in the sense that I do not expect them to reciprocate my affection.
Most importantly, I make a conscious effort , not to interfere or pass judgements on the lives they choose to lead.
My concern for my near and dear ones will not fade with my detachment.
If you let go of the ones you love, they will never go away –
this is the beauty of attachment with detachment !
I have learnt to love and let go.
This dictum has developed tolerance in me.
When I let the people live the way they want to, I learn to accept them for what they are.
Most importantly ,
I learn to tolerate the world around me and this tolerance brings in me a sense of peace and contentment.
Since both my children live in Chennai, I follow this very strictly, you know why !
Now I have realised that we start growing mentally much more only after the children leave the house and we have to tackle the emotional vacuum, that arises, along with age-related problems .
I specially dedicate this post to my friends, who are totally dependant on their children's lives, to nurture their own selves emotionally.
Please develop your own intersts, hobbies etc, however mundane they seem to be..
We must learn
To love whatever we do
instead of
Doing whatever we love !!
🍀🍀🍀🍀
Saturday, September 24, 2016
Tuesday, October 20, 2015
ಎಲ್ಲ ತಂದೆ ತಾಯಂದಿರ ಆತ್ಮಾವಲೋಕನಕ್ಕಾಗಿ
ಎಲ್ಲ ತಂದೆ ತಾಯಂದಿರೂ ಆತ್ಮಾವಲೋಕನ ಮಾಡಿಕೊಳ್ಳುವಂತಿದೆ.
ಮಕ್ಕಳೂ ಕೂಡ ತಮ್ಮ ಬಾಲ್ಯದತ್ತ ಹಿನ್ನೋಟ ಹರಿಸುವಂತಿದೆ
ಈ ಪತ್ರಿಕ ಬರಹ.
ಮಕ್ಕಳೂ ಕೂಡ ತಮ್ಮ ಬಾಲ್ಯದತ್ತ ಹಿನ್ನೋಟ ಹರಿಸುವಂತಿದೆ
ಈ ಪತ್ರಿಕ ಬರಹ.
Sunday, July 31, 2011
ಕಥೆ ಏಕೆ ಮತ್ತು ಹೇಗೆ ಬರೆಯಬೇಕು...?
ಯಾವುದೇ ವಸ್ತು, ವಿಷಯ, ಘಟನೆ ಬಿಡದೇ ತಿಂಗಳಾನುಗಟ್ಟಲೇ, ವರ್ಷಗಳೇ ಕಾಡಿದಾಗ ಅದು ಕಥೆಯೋ ಕಾದಂಬರಿಯೋ ಆಗಿ ರೂಪ ತಳೆಯುತ್ತದೆ. ಕಥಾ ವಸ್ತುವಿನ ಆಯ್ಕೆ, ಅದು ಬೆರಗೊಡೆದು ಹೇಳಬಹುದಾದ ಹೊಸದೊಂದು ಕಥೆಯಾಗುತ್ತದೆಯೇ ಎಂಬ ಸೂಕ್ತ ಪರಾಮರ್ಶೆ ಮೊದಲಾಗಬೇಕು. ನಂತರ ಕಥಾ ರಚನೆ, ದಟ್ಟವಾದ ವಿವರಣೆ ಇದ್ದೂ ಓದುಗನನ್ನು ಸೆಳೆದುಕೊಳ್ಳುವ ಆಕರ್ಷಕ ಕಲ್ಪನೆ, ನಿರೂಪಣಾ ತಂತ್ರಗಳಂತಹ ತಾಂತ್ರಿಕ ಸಂಗತಿಗಳವರೆಗೆ ಕಥೆಯ ವ್ಯಾಪ್ತಿ ಹರವು ಇರುತ್ತದೆ. ಕಥೆ ಬರೆಯುವುದಕ್ಕೆ ಅಗತ್ಯವಾದ ಮೂಲ ಪ್ರೇರಣೆಗಳೆಂದರೆ- ಸ್ವಂತ ಅನುಭವ, ಸಂವೇದನೆ ಮತ್ತು ಸೃಜನಶೀಲ ಪ್ರತಿಭೆಗಳಿಂದ ಬರುತ್ತದೆ.
ಆದರೂ ಕಥಾ ರಚನೆಯ ಕಲೆಗಾರಿಕೆಯು ಅನೇಕ ಶ್ರೇಷ್ಠವಾದ ಕಥೆಗಳ ಆಭ್ಯಾಸಪೂರ್ಣ ಅಧ್ಯಯನದಿಂದ ಮಾತ್ರ ಬರುತ್ತದೆ. ಕನ್ನಡದಲ್ಲಿ ಮತ್ತು ಅನ್ಯಭಾಷೆಗಳಲ್ಲಿ ಬಂದಿರುವ ನೂರಾರು ಕಥೆಗಳನ್ನು ಎಚ್ಚರದಿಂದ ಓದಿದಾಗ ಆಗುವ ಅನುಭವಗಳಿಂದ ಮತ್ತು ಅವುಗಳ ಅರ್ಥವಂತಿಕೆ ಸೋಪಜ್ಞತೆ ಹಾಗೂ ಶೈಲಿಗಳ ಹಲವು ಸಂಕೀರ್ಣ ಬಗೆಗಳು ಬರೆಯುವವನಿಗೆ ಗೋಚರವಾಗುತ್ತವೆ. ಅಂತಹ ಸಂದರ್ಭದಲ್ಲೂ ಸ್ವಂತಿಕೆಯಿಂದ ಸೃಜಿಸಲ್ಪಡುವ ಬರವಣಿಗೆಯಲ್ಲಿ ಬರೆಯುವವಗೆ ಅಂತರಂಗದ ಧ್ವನಿಯೊಂದು ಕೇಳಿ ಬರಬೇಕು; ಆಗ ಮಾತ್ರ ಬರವಣಿಗೆ ಸರಾಗ ಸಲಲಿತವಾಗಿ ಸಾಗುತ್ತದೆ. ಸುಭಗ ಶೈಲಿ ಎಂಬುದು ಆನಂತರವಷ್ಟೇ ಪೂರ್ವಭಾವಿ ಸಿದ್ದತೆಯಲ್ಲಿ ಆಗಿರಬಹುದಾದ ಏನೆಲ್ಲ ಅಧ್ಯಯನದಿಂದ ತಂತಾನೆ ಕೂಡಿಬರಲು ಸಾಧ್ಯವಾಗುತ್ತದೆ.
ಕಥೆ ಕಾದಂಬರಿಗಳ ಬಗ್ಗೆ ಪ್ರಸಿದ್ಧ ಲೇಖಕರು ಹಾಗೂ ವಿಮರ್ಶಕರು ಏನು ಹೇಳುತ್ತಾರೆ ನೋಡೋಣ-
ಇತ್ತೀಚೆಗೆ ಕನ್ನಡದ ಸುಪ್ರಸಿದ್ಧ ಕಾದಂಬರಿಕಾರ ಎಸ್.ಎಲ್. ಭೈರಪ್ಪನವರ ಕೃತಿಗಳ ಬಗ್ಗೆ ಟೀಕೆ ವಿಮರ್ಶೆಗಳು ಬಹಳ ಬರುತ್ತಿವೆ. ಪತ್ರಿಕೆಗಳೂ ಅವುಗಳಿಗೆ ಪ್ರಾಶಸ್ತ್ಯವೀಯುತ್ತ ಪ್ರಕಟಿಸುತ್ತಿವೆ.
ಒಂದು ರೀತಿ ಪೂರ್ವಾಗ್ರಹ ಪೀಡಿತರಾಗಿ ಭೈರಪ್ಪನವರ ಕೃತಿಗಳನ್ನು ಟೀಕಿಸಿದವರೆಂದರೆ ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಯು.ಆರ್. ಅನಂತ ಮೂರ್ತಿಗಳು. ಅವರ ಮಾತಂತಿರಲಿ, ಯಾಕೆಂದರೆ, ಅ.ನ.ಕೃಷ್ಣರಾಯರ ಕಾಲದಿಂದಲೂ ಜನಪ್ರಿಯ ಲೇಖಕರನ್ನು ಅಕೆಡಮಿಕ್ ಲೆವೆಲ್ ನಲ್ಲಿ ಮೇಧಾವಿಗಳೆಂದು ಕರೆಸಿಕೊಳ್ಳುವ ಸಾಹಿತ್ಯ ದಿಗ್ಗಜರು ಮತ್ತು ವಿಮರ್ಶಕರೂ ಅವರನ್ನು ಅಸ್ಪೃಶ್ಯರೆಂಬಂತೇ ಅಲ್ಲಗೆಳೆದಿದ್ದಾರೆ. ಆದರೇನು! ಅನಕೃ ಕನ್ನಡ ಚಳುವಳಿಗಾರರೂ ಆಗಿ ಕಥೆ ಕಾದಂಬರಿಕಾರರೂ ಆಗಿ ಮನೆ ಮಾತಾಗಿದ್ದರು. ಈಗ ಎಸ್.ಎಲ್.ಭೈರಪ್ಪನವರ ಸರದಿ. ಭೈರಪ್ಪನವರು ತಮ್ಮ ಕೃತಿಗಳಿಂದ ಕನ್ನಡವನ್ನೂ ವಿದೇಶಕ್ಕೂ ಕೊಂಡೊಯ್ದುವರಲ್ಲಿ ಹೆಚ್ಚು ಪ್ರಸಿದ್ಧರೂ ಆಗಿ ಇನ್ನೂ ಒಂದು ಹೆಜ್ಜೆ ಮಂದೆ ಹೋಗಿದ್ದಾರೆ ಎಂದರೆ ತಪ್ಪಾಗಲಾರದು.
ಆದರೆ, ಯಾವುದು ಸಮಾಜದ ಕಟ್ಟಕಡೆಯ ಓದುಗನನ್ನು ತಲುಪಬಲ್ಲದೋ ಅವನನನ್ನು ಸೆಳೆದುಕೊಳ್ಳಬಲ್ಲದೋ ಅದೇ ಶ್ರೇ ಷ್ಠವಾದ ಜನಪರ ಕಾಳಜಿಯ ಸಾಮಾಜಿಕ ಬದ್ಧತೆಯುಳ್ಳ ಸಾಹಿತ್ಯ ಎಂಬುದನ್ನು ಮರೆಯಲಾಗದು. ಕುವೆಂಪು, ಬೇಂದ್ರೆ, ಕೆ.ಎಸ್ .ನ., ದೇವುಡು, ಮಾಸ್ತಿ ಮುಂತಾದ ವರ ಸಾಹಿತ್ಯ ಕೃತಿಗಳೆಷ್ಟೋ ಆ ಬಗೆಯಲ್ಲಿ ವೈಶಿಷ್ಟ್ಯಪೂರ್ಣವೆನಿಸಿ ಸರ್ವಕಾಲಿಕ ಸತ್ಯವನ್ನು ಶೃತಪಡಿಸಿವೆಯಲ್ಲವೇ...? ಈ ಚರ್ಚೆಯಂತಿರಲಿ, ಇದೀಗ ಕಥಾ ಸಾಹಿತ್ಯ ಕೃತಿಯೊಂದು ಹೇಗಿರಬೇಕೆಂದರೆ ತಾನು ಪ್ರತಿಪಾದಿಸವುದರ ವಿರುದ್ಧವಾದ ದೃಷ್ಟಿಕೋನವನ್ನೂಸಹ ಕಥೆ ಕಾದಂಬರಿಯಲ್ಲಿ ಒಳಗೊಂಡಿರಬೇಕೆಂದೂ ಸಾಹಿತಿ ವಿಮರ್ಶಕ ರಾಮಚಂದ್ರದೇವ ಹೇಳುತ್ತಾರೆ. ಅವರ ಈ ಮಾತು ನಿಜಕ್ಕೂ ಒಪ್ಪುವಂತಹದ್ದು. ಎಷ್ಟೋ ಸಂದರ್ಭಗಳಲ್ಲಿ ಕಥೆಯೊಂದರಲ್ಲಿ ಒಂದು ದೃಷ್ಟಿಕೋನದ ಪ್ರತಿಪಾದನೆ ಮಾತ್ರ ಇದೆಯೋ ಅದರೊಂದಿಗೇ ಆದಕ್ಕೆ ವಿರುದ್ಧವೆನ್ನಬಹುದಾದ ಇನ್ನೊಂದು ದೃಷ್ಟಿಕೋನವೂ ಅದು ಒಳಗೊಂಡಿದೆಯೋ ಎಂಬುದೇನೂ ಓದುಗನ ಗಮನಕ್ಕೆ ಬರುವುದೇ ಇಲ್ಲ. ಸಾಮಾನ್ಯ ಓದುಗನೊಬ್ಬನನ್ನು ಸೆಳೆದುಕೊಳ್ಳಲು ಅದು ಅತ್ಯಗತ್ಯವೂ ಆಗಿರುವುದಿಲ್ಲ ಅಲ್ಲವೇ...? ಅಂತಹದೇನಿದ್ದರೂ ದೊಡ್ಡವರೆನಿಸಿಕೊಂಡ ಲೇಖಕರು ಮತ್ತು ಕಟು ವಿಮರ್ಶಕರಿಗೆ ಮಾತ್ರ ಅಗತ್ಯವಾಗಿರುತ್ತದೆ.
ಏನೇ ಆಗಲಿ, ಕನ್ನಡ ಕಾದಂಬರಿಯ ಇತಿಹಾಸ ನಡೆದು ಬಂದ ದಾರಿಯಲ್ಲಿ ಗಳಗನಾಥರು, ಬಿ.ವೆಂಕಟಾಚಾರ್ಯ ರ ಮಾರ್ಗದಲ್ಲಿ ಕನ್ನಡ ಓದುಗರೇ ಇಲ್ಲದ ಆ ಕಾಲಘಟ್ಟದಲ್ಲಿ ಸಾವಿರಾರು ಓದುಗರನ್ನುಸೃಷ್ಟಿಮಾಡಿದ ಅವರಂತಹ ಮಹಾನ್ ಲೇಖರ ಸಾಲಿನಲ್ಲಿ, ಕಾದಂಬರಿ ಸಾರ್ವಬೌಮರೆನಿಸಿದವರು ಅನಕೃ ಅವರು. ಆನಂತರ , ಬಂದಿರುವವರೆಂದರೆ ಎಸ್.ಎಲ್. ಭೈರಪ್ಪನವರು ಎಂಬದು ನಿರ್ವಿವಾದವೇ ಆಗಿಬಿಟ್ಟಿದೆ.
ಇದೀಗ ಇಂಗ್ಲೀಷ್ ವ್ಯಾಮೋಹದಿಂದ ಕನ್ನಡ ಸಾಮಾನ್ಯ ಓದುಗರ ಸಂಖ್ಯೆ ದಿನೇ ದಿನೇ ಸೊರಗುತ್ತಿರುವ ಐಟಿಯುಗ- ಮಾಹಿಯುಗದ ಬೃಹತ್ ಜಾಲದಲ್ಲಿ ಇಂದು ನಾವಿದ್ದೇವೆ. ಸಾಹಿತ್ಯವೆಂಬುದು ಕೇವಲ ವಿಶ್ವವಿದ್ಯಾಲಯ ಮಟ್ಟದ ವಿದ್ವಜ್ಜನರಿಗೆ ವಿದ್ವಾಂಸರಿಗೆ ಅಕೆಡೆಮಿಕ್ ಮಟ್ಟದಲ್ಲಿ ಗುರುತಿಸಿಕೊಂಡ ದೊಡ್ಡ ಸಾಹಿತಿಗಳ ದೃಷ್ಟಿಕೋನಕ್ಕಷ್ಟೇ ಸೀಮಿತವೇ...? ಅಥವಾ ಅಂತಹ ದೊಡ್ಡವರನ್ನು ತೃಪ್ತಿಪಡಿಸಬಲ್ಲ ಹೊಸ ಲೇಖಕರಿಗೆ ಮತ್ತು ಅಂತಹ ಕೃತಿಗಳನ್ನಷ್ಟೇ ಓದಬಲ್ಲ ಕೇವಲ ಸಾಹಿತ್ಯಾಸಕ್ತ ರಿಗೆ ಮಾತ್ರವೇ ಎಂಬ ಪ್ರಶ್ನೆಗಳೂ ಈ ಕಾಲಮಾನದಲ್ಲಿ ಗಂಭೀರ ಚರ್ಚೆಗೆ ಮುಖ್ಯವೆನಿಸುತ್ತವೆಯಲ್ಲವೆ...?
ಅದಿರಲಿ, ಮತ್ತೆ ಕಥೆ ಹೇಗಿರಬೇಕೆಂಬುದರ ಬಗ್ಗೆ ಹಿರಿಯರ ಅಭಿಪ್ರಾಯ ಒಂದಿಷ್ಟು ತಿಳಿಯೋಣ-
ಖ್ಯಾತ ಪತ್ರ ಕರ್ತ ಲೇಖಕ ಲಂಕೇಶ್ ಕತೆಗಾರನಿಗೆ ಹೀಗೆ ಹೇಳುತ್ತಾರೆ-
ಕ್ರಿಯಾಶೀಲ ಬರಹ ಯಾವುದು?
ಖ್ಯಾತ ಪತ್ರ ಕರ್ತ ಲೇಖಕ ಲಂಕೇಶ್ ಕತೆಗಾರನಿಗೆ ಹೀಗೆ ಹೇಳುತ್ತಾರೆ-
"ನಿನ್ನ ಕತೆಯಲ್ಲಿ ಜನ ಬರಹಗಾರನಾದ ನಿನ್ನ ಹಂಗು ತೊರೆದು, ತಮ್ಮದೇ ಆದ ಒಂದು ಜೀವ ಪಡೆಯುವಂತಿರಬೇಕು. ಒಂದು ಸಾಹಿತ್ಯ ಕೃತಿಯ ಪ್ರತಿಯೊಂದು ಪಾತ್ರವೂ ಸಾಹಿತಿಯ ನಿಯಂತ್ರಣದಲ್ಲಿ ಇರುವಂತೆ ಕಂಡರೂ ಸ್ವತಂತ್ರವಾಗಿ ವರ್ತಿಸಬೇಕು. ತನ್ನ ಹಿನ್ನೆಲೆ, ಬೆಳೆದ ರೀತಿಗೆ ತಕ್ಕಂತೆ ಘಟನೆ ಮತ್ತು ಸಹಪಾತ್ರಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು, ಮಾಡಿಕೊಳ್ಳಲಾಗದೇ ತನ್ನ ಜೀವ ಬೆಳೆಸಿಕೊಳ್ಳಬೇಕು. ಅದು ನಿನ್ನ ಕಥೆಯಲ್ಲಿ ಆಗುವುದೇ...? ಕತೆ ಬರೆಯಬೇಕೆಂದು ಎಲ್ಲೋ ಆದ ಘಟನೆಯನ್ನು ಮಂಡಿಸಿವುದಷ್ಟೇ ಕ್ರಿಯಾಶೀಲ ಬರಹವಾಗಲಾರದು.. (ಲಂಕೇಶ ರ ಮರೆಯುವ ಮುನ್ನ ಅಂಕಣದಲ್ಲಿ)
ಕವಿ ಪು.ತಿ. ನರಸಿಂಹಾ ಚಾರ್ಯ್ಯ ರು ಹೇಳುತ್ತಾರೆ
ಉಲ್ಲಂಘನೆ ಇಲ್ಲದೇ ಕವಿತೆ ಇಲ್ಲ. ಮತ್ತು irreverance ಇಲ್ಲದೇ ಸೌಂದರ್ಯವಿಲ್ಲ. ಯಾಕೆಂದರೆ, ರೂಢಿಯನ್ನು ಬಿಟ್ಟು ಮನಸ್ಸು ಎಡವುದರಲ್ಲೇ ಅದು ತನ್ನ ಹಾಜರಿಯನ್ನು ಅರ್ಥವನ್ನು ಗಳಿಸಿಕೊಳ್ಳುತ್ತದೆ ಎಂದು ತಿಳಿದವರು ಪು.ತಿ.ನ. ರೂಢಿ ಎನ್ನುವುದು ಭವ. ಅದನ್ನು ಮುರಿದದ್ದು ಭಾವ ಅವರಿಗೆ. imagination ಎಂದರೆ ಅದು ಬರಿಯ ಕಾವ್ಯದ ತಂತ್ರವಲ್ಲ. ಅದು ಅಗತ್ಯವಾದ ಪರ್ಯಾಯ ಜೀವನ ದೃಷ್ಟಿ ಮತ್ತು ವ್ಯಕ್ತಿತ್ವ.
ಆದರೂ ಕಥಾ ರಚನೆಯ ಕಲೆಗಾರಿಕೆಯು ಅನೇಕ ಶ್ರೇಷ್ಠವಾದ ಕಥೆಗಳ ಆಭ್ಯಾಸಪೂರ್ಣ ಅಧ್ಯಯನದಿಂದ ಮಾತ್ರ ಬರುತ್ತದೆ. ಕನ್ನಡದಲ್ಲಿ ಮತ್ತು ಅನ್ಯಭಾಷೆಗಳಲ್ಲಿ ಬಂದಿರುವ ನೂರಾರು ಕಥೆಗಳನ್ನು ಎಚ್ಚರದಿಂದ ಓದಿದಾಗ ಆಗುವ ಅನುಭವಗಳಿಂದ ಮತ್ತು ಅವುಗಳ ಅರ್ಥವಂತಿಕೆ ಸೋಪಜ್ಞತೆ ಹಾಗೂ ಶೈಲಿಗಳ ಹಲವು ಸಂಕೀರ್ಣ ಬಗೆಗಳು ಬರೆಯುವವನಿಗೆ ಗೋಚರವಾಗುತ್ತವೆ. ಅಂತಹ ಸಂದರ್ಭದಲ್ಲೂ ಸ್ವಂತಿಕೆಯಿಂದ ಸೃಜಿಸಲ್ಪಡುವ ಬರವಣಿಗೆಯಲ್ಲಿ ಬರೆಯುವವಗೆ ಅಂತರಂಗದ ಧ್ವನಿಯೊಂದು ಕೇಳಿ ಬರಬೇಕು; ಆಗ ಮಾತ್ರ ಬರವಣಿಗೆ ಸರಾಗ ಸಲಲಿತವಾಗಿ ಸಾಗುತ್ತದೆ. ಸುಭಗ ಶೈಲಿ ಎಂಬುದು ಆನಂತರವಷ್ಟೇ ಪೂರ್ವಭಾವಿ ಸಿದ್ದತೆಯಲ್ಲಿ ಆಗಿರಬಹುದಾದ ಏನೆಲ್ಲ ಅಧ್ಯಯನದಿಂದ ತಂತಾನೆ ಕೂಡಿಬರಲು ಸಾಧ್ಯವಾಗುತ್ತದೆ.
ಕಥೆ ಕಾದಂಬರಿಗಳ ಬಗ್ಗೆ ಪ್ರಸಿದ್ಧ ಲೇಖಕರು ಹಾಗೂ ವಿಮರ್ಶಕರು ಏನು ಹೇಳುತ್ತಾರೆ ನೋಡೋಣ-
ಇತ್ತೀಚೆಗೆ ಕನ್ನಡದ ಸುಪ್ರಸಿದ್ಧ ಕಾದಂಬರಿಕಾರ ಎಸ್.ಎಲ್. ಭೈರಪ್ಪನವರ ಕೃತಿಗಳ ಬಗ್ಗೆ ಟೀಕೆ ವಿಮರ್ಶೆಗಳು ಬಹಳ ಬರುತ್ತಿವೆ. ಪತ್ರಿಕೆಗಳೂ ಅವುಗಳಿಗೆ ಪ್ರಾಶಸ್ತ್ಯವೀಯುತ್ತ ಪ್ರಕಟಿಸುತ್ತಿವೆ.
ಒಂದು ರೀತಿ ಪೂರ್ವಾಗ್ರಹ ಪೀಡಿತರಾಗಿ ಭೈರಪ್ಪನವರ ಕೃತಿಗಳನ್ನು ಟೀಕಿಸಿದವರೆಂದರೆ ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಯು.ಆರ್. ಅನಂತ ಮೂರ್ತಿಗಳು. ಅವರ ಮಾತಂತಿರಲಿ, ಯಾಕೆಂದರೆ, ಅ.ನ.ಕೃಷ್ಣರಾಯರ ಕಾಲದಿಂದಲೂ ಜನಪ್ರಿಯ ಲೇಖಕರನ್ನು ಅಕೆಡಮಿಕ್ ಲೆವೆಲ್ ನಲ್ಲಿ ಮೇಧಾವಿಗಳೆಂದು ಕರೆಸಿಕೊಳ್ಳುವ ಸಾಹಿತ್ಯ ದಿಗ್ಗಜರು ಮತ್ತು ವಿಮರ್ಶಕರೂ ಅವರನ್ನು ಅಸ್ಪೃಶ್ಯರೆಂಬಂತೇ ಅಲ್ಲಗೆಳೆದಿದ್ದಾರೆ. ಆದರೇನು! ಅನಕೃ ಕನ್ನಡ ಚಳುವಳಿಗಾರರೂ ಆಗಿ ಕಥೆ ಕಾದಂಬರಿಕಾರರೂ ಆಗಿ ಮನೆ ಮಾತಾಗಿದ್ದರು. ಈಗ ಎಸ್.ಎಲ್.ಭೈರಪ್ಪನವರ ಸರದಿ. ಭೈರಪ್ಪನವರು ತಮ್ಮ ಕೃತಿಗಳಿಂದ ಕನ್ನಡವನ್ನೂ ವಿದೇಶಕ್ಕೂ ಕೊಂಡೊಯ್ದುವರಲ್ಲಿ ಹೆಚ್ಚು ಪ್ರಸಿದ್ಧರೂ ಆಗಿ ಇನ್ನೂ ಒಂದು ಹೆಜ್ಜೆ ಮಂದೆ ಹೋಗಿದ್ದಾರೆ ಎಂದರೆ ತಪ್ಪಾಗಲಾರದು.
ಆದರೆ, ಯಾವುದು ಸಮಾಜದ ಕಟ್ಟಕಡೆಯ ಓದುಗನನ್ನು ತಲುಪಬಲ್ಲದೋ ಅವನನನ್ನು ಸೆಳೆದುಕೊಳ್ಳಬಲ್ಲದೋ ಅದೇ ಶ್ರೇ ಷ್ಠವಾದ ಜನಪರ ಕಾಳಜಿಯ ಸಾಮಾಜಿಕ ಬದ್ಧತೆಯುಳ್ಳ ಸಾಹಿತ್ಯ ಎಂಬುದನ್ನು ಮರೆಯಲಾಗದು. ಕುವೆಂಪು, ಬೇಂದ್ರೆ, ಕೆ.ಎಸ್ .ನ., ದೇವುಡು, ಮಾಸ್ತಿ ಮುಂತಾದ ವರ ಸಾಹಿತ್ಯ ಕೃತಿಗಳೆಷ್ಟೋ ಆ ಬಗೆಯಲ್ಲಿ ವೈಶಿಷ್ಟ್ಯಪೂರ್ಣವೆನಿಸಿ ಸರ್ವಕಾಲಿಕ ಸತ್ಯವನ್ನು ಶೃತಪಡಿಸಿವೆಯಲ್ಲವೇ...? ಈ ಚರ್ಚೆಯಂತಿರಲಿ, ಇದೀಗ ಕಥಾ ಸಾಹಿತ್ಯ ಕೃತಿಯೊಂದು ಹೇಗಿರಬೇಕೆಂದರೆ ತಾನು ಪ್ರತಿಪಾದಿಸವುದರ ವಿರುದ್ಧವಾದ ದೃಷ್ಟಿಕೋನವನ್ನೂಸಹ ಕಥೆ ಕಾದಂಬರಿಯಲ್ಲಿ ಒಳಗೊಂಡಿರಬೇಕೆಂದೂ ಸಾಹಿತಿ ವಿಮರ್ಶಕ ರಾಮಚಂದ್ರದೇವ ಹೇಳುತ್ತಾರೆ. ಅವರ ಈ ಮಾತು ನಿಜಕ್ಕೂ ಒಪ್ಪುವಂತಹದ್ದು. ಎಷ್ಟೋ ಸಂದರ್ಭಗಳಲ್ಲಿ ಕಥೆಯೊಂದರಲ್ಲಿ ಒಂದು ದೃಷ್ಟಿಕೋನದ ಪ್ರತಿಪಾದನೆ ಮಾತ್ರ ಇದೆಯೋ ಅದರೊಂದಿಗೇ ಆದಕ್ಕೆ ವಿರುದ್ಧವೆನ್ನಬಹುದಾದ ಇನ್ನೊಂದು ದೃಷ್ಟಿಕೋನವೂ ಅದು ಒಳಗೊಂಡಿದೆಯೋ ಎಂಬುದೇನೂ ಓದುಗನ ಗಮನಕ್ಕೆ ಬರುವುದೇ ಇಲ್ಲ. ಸಾಮಾನ್ಯ ಓದುಗನೊಬ್ಬನನ್ನು ಸೆಳೆದುಕೊಳ್ಳಲು ಅದು ಅತ್ಯಗತ್ಯವೂ ಆಗಿರುವುದಿಲ್ಲ ಅಲ್ಲವೇ...? ಅಂತಹದೇನಿದ್ದರೂ ದೊಡ್ಡವರೆನಿಸಿಕೊಂಡ ಲೇಖಕರು ಮತ್ತು ಕಟು ವಿಮರ್ಶಕರಿಗೆ ಮಾತ್ರ ಅಗತ್ಯವಾಗಿರುತ್ತದೆ.
ಏನೇ ಆಗಲಿ, ಕನ್ನಡ ಕಾದಂಬರಿಯ ಇತಿಹಾಸ ನಡೆದು ಬಂದ ದಾರಿಯಲ್ಲಿ ಗಳಗನಾಥರು, ಬಿ.ವೆಂಕಟಾಚಾರ್ಯ ರ ಮಾರ್ಗದಲ್ಲಿ ಕನ್ನಡ ಓದುಗರೇ ಇಲ್ಲದ ಆ ಕಾಲಘಟ್ಟದಲ್ಲಿ ಸಾವಿರಾರು ಓದುಗರನ್ನುಸೃಷ್ಟಿಮಾಡಿದ ಅವರಂತಹ ಮಹಾನ್ ಲೇಖರ ಸಾಲಿನಲ್ಲಿ, ಕಾದಂಬರಿ ಸಾರ್ವಬೌಮರೆನಿಸಿದವರು ಅನಕೃ ಅವರು. ಆನಂತರ , ಬಂದಿರುವವರೆಂದರೆ ಎಸ್.ಎಲ್. ಭೈರಪ್ಪನವರು ಎಂಬದು ನಿರ್ವಿವಾದವೇ ಆಗಿಬಿಟ್ಟಿದೆ.
ಇದೀಗ ಇಂಗ್ಲೀಷ್ ವ್ಯಾಮೋಹದಿಂದ ಕನ್ನಡ ಸಾಮಾನ್ಯ ಓದುಗರ ಸಂಖ್ಯೆ ದಿನೇ ದಿನೇ ಸೊರಗುತ್ತಿರುವ ಐಟಿಯುಗ- ಮಾಹಿಯುಗದ ಬೃಹತ್ ಜಾಲದಲ್ಲಿ ಇಂದು ನಾವಿದ್ದೇವೆ. ಸಾಹಿತ್ಯವೆಂಬುದು ಕೇವಲ ವಿಶ್ವವಿದ್ಯಾಲಯ ಮಟ್ಟದ ವಿದ್ವಜ್ಜನರಿಗೆ ವಿದ್ವಾಂಸರಿಗೆ ಅಕೆಡೆಮಿಕ್ ಮಟ್ಟದಲ್ಲಿ ಗುರುತಿಸಿಕೊಂಡ ದೊಡ್ಡ ಸಾಹಿತಿಗಳ ದೃಷ್ಟಿಕೋನಕ್ಕಷ್ಟೇ ಸೀಮಿತವೇ...? ಅಥವಾ ಅಂತಹ ದೊಡ್ಡವರನ್ನು ತೃಪ್ತಿಪಡಿಸಬಲ್ಲ ಹೊಸ ಲೇಖಕರಿಗೆ ಮತ್ತು ಅಂತಹ ಕೃತಿಗಳನ್ನಷ್ಟೇ ಓದಬಲ್ಲ ಕೇವಲ ಸಾಹಿತ್ಯಾಸಕ್ತ ರಿಗೆ ಮಾತ್ರವೇ ಎಂಬ ಪ್ರಶ್ನೆಗಳೂ ಈ ಕಾಲಮಾನದಲ್ಲಿ ಗಂಭೀರ ಚರ್ಚೆಗೆ ಮುಖ್ಯವೆನಿಸುತ್ತವೆಯಲ್ಲವೆ...?
ಅದಿರಲಿ, ಮತ್ತೆ ಕಥೆ ಹೇಗಿರಬೇಕೆಂಬುದರ ಬಗ್ಗೆ ಹಿರಿಯರ ಅಭಿಪ್ರಾಯ ಒಂದಿಷ್ಟು ತಿಳಿಯೋಣ-
ಖ್ಯಾತ ಪತ್ರ ಕರ್ತ ಲೇಖಕ ಲಂಕೇಶ್ ಕತೆಗಾರನಿಗೆ ಹೀಗೆ ಹೇಳುತ್ತಾರೆ-
ಕ್ರಿಯಾಶೀಲ ಬರಹ ಯಾವುದು?
ಖ್ಯಾತ ಪತ್ರ ಕರ್ತ ಲೇಖಕ ಲಂಕೇಶ್ ಕತೆಗಾರನಿಗೆ ಹೀಗೆ ಹೇಳುತ್ತಾರೆ-
"ನಿನ್ನ ಕತೆಯಲ್ಲಿ ಜನ ಬರಹಗಾರನಾದ ನಿನ್ನ ಹಂಗು ತೊರೆದು, ತಮ್ಮದೇ ಆದ ಒಂದು ಜೀವ ಪಡೆಯುವಂತಿರಬೇಕು. ಒಂದು ಸಾಹಿತ್ಯ ಕೃತಿಯ ಪ್ರತಿಯೊಂದು ಪಾತ್ರವೂ ಸಾಹಿತಿಯ ನಿಯಂತ್ರಣದಲ್ಲಿ ಇರುವಂತೆ ಕಂಡರೂ ಸ್ವತಂತ್ರವಾಗಿ ವರ್ತಿಸಬೇಕು. ತನ್ನ ಹಿನ್ನೆಲೆ, ಬೆಳೆದ ರೀತಿಗೆ ತಕ್ಕಂತೆ ಘಟನೆ ಮತ್ತು ಸಹಪಾತ್ರಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು, ಮಾಡಿಕೊಳ್ಳಲಾಗದೇ ತನ್ನ ಜೀವ ಬೆಳೆಸಿಕೊಳ್ಳಬೇಕು. ಅದು ನಿನ್ನ ಕಥೆಯಲ್ಲಿ ಆಗುವುದೇ...? ಕತೆ ಬರೆಯಬೇಕೆಂದು ಎಲ್ಲೋ ಆದ ಘಟನೆಯನ್ನು ಮಂಡಿಸಿವುದಷ್ಟೇ ಕ್ರಿಯಾಶೀಲ ಬರಹವಾಗಲಾರದು.. (ಲಂಕೇಶ ರ ಮರೆಯುವ ಮುನ್ನ ಅಂಕಣದಲ್ಲಿ)
ಕವಿ ಪು.ತಿ. ನರಸಿಂಹಾ ಚಾರ್ಯ್ಯ ರು ಹೇಳುತ್ತಾರೆ
ಉಲ್ಲಂಘನೆ ಇಲ್ಲದೇ ಕವಿತೆ ಇಲ್ಲ. ಮತ್ತು irreverance ಇಲ್ಲದೇ ಸೌಂದರ್ಯವಿಲ್ಲ. ಯಾಕೆಂದರೆ, ರೂಢಿಯನ್ನು ಬಿಟ್ಟು ಮನಸ್ಸು ಎಡವುದರಲ್ಲೇ ಅದು ತನ್ನ ಹಾಜರಿಯನ್ನು ಅರ್ಥವನ್ನು ಗಳಿಸಿಕೊಳ್ಳುತ್ತದೆ ಎಂದು ತಿಳಿದವರು ಪು.ತಿ.ನ. ರೂಢಿ ಎನ್ನುವುದು ಭವ. ಅದನ್ನು ಮುರಿದದ್ದು ಭಾವ ಅವರಿಗೆ. imagination ಎಂದರೆ ಅದು ಬರಿಯ ಕಾವ್ಯದ ತಂತ್ರವಲ್ಲ. ಅದು ಅಗತ್ಯವಾದ ಪರ್ಯಾಯ ಜೀವನ ದೃಷ್ಟಿ ಮತ್ತು ವ್ಯಕ್ತಿತ್ವ.
Monday, January 17, 2011
ಶ್ರೀಮಂತರ ಮೋಜು ಮಾಯೆಯಾಗಿ ಕಾಡದಿರಲಿ...
![]() | ||||||
| ಬೆಂಗಳೂರು ಶ್ರೀಮಂತರ ಮೋಜಿನ ಬಡವರ ಕನಸಿನ ರಸ್ತೆ |
ಅಷ್ಟಕ್ಕೂ ಸಿಕ್ಕುವುದೆಷ್ಟೆಂಬುದಕ್ಕಿಂತ ದಕ್ಕಿಸಿಕೊಳ್ಳವುದೆಷ್ಟೆಂಬುದು ಸ್ವಾರ್ಥವಷ್ಟೇ ಅಲ್ಲ; ಸಾಮರ್ಥ್ಯದ ಕೆಲಸ. ದಕ್ಕಿಸಿಕೊಳ್ಳಲು ಸಾಧ್ಯವಿದ್ದರೂ ದೊರೆಯದಂತೆ ಮಾಡುವುದೂ ಮೋಸದ ಮನಸ್ಸಿನ ಕೆಲಸ. ಇಂತಹ ಮನಸ್ಸುಗಳ ನಡುವೆ ಪ್ರಕೃತಿ ಸಹಜ ಸ್ನೇಹದಲಿ ಮೊಳೆತು ಮೊಗ್ಗಾಗಿ ಅರಳುವುದೇ ಹೂವಿನಾ ಸೊಗಸು; ಅದೇ ಫಲಕೊಡುವ ನನಸು. ಆಂ, ಇಲ್ಲವೇಇಲ್ಲ, ಶುದ್ಧ ಮನಸಿನ ಹಿಡಿತವಿರುವ ಬದುಕಿನಲಿ ಇರಿಸು ಮುರಿಸು. ಕ್ಷಣ ಭೃಂಗುರವಾಗಿ ಕಾಡದಿರಲಿ ಮಾಯೆಯ ಮುಸುಕು.
Friday, November 5, 2010
ನಾ ಕಂಡ ತಿರುವನಂತಪುರಂ ಮತ್ತು ಕನ್ಯಾಕುಮಾರಿ
(ಒಂದು ಅಪೂರ್ವ ಪ್ರವಾಸ ಕಥನ)-2
![]() |
| Mangalore Railway Station. |
ಅಲ್ಲಿಯವರೆಗೆ ಫ್ಲಾಟ್ ಫಾರಂನಲ್ಲೇ ನಿದ್ರೆ ಹೋಗುವುದೋ ಕಾಲಾಹರಣ ಮಾಡುವುದೋ ಆಗಬೇಕಿತ್ತು. ಅಲ್ಲೇ ಸೊಳ್ಳೆಗಳ ಕಾಟ ಬೇರೆ ವಕ್ಕಸಿಕೊಳ್ಳಬೇಕೇ… ಹೊಟ್ಟೆಬೇರೆ ತಾಳ ಹಾಕತೊಡಗಿತ್ತಲ್ಲ; ಟೀ ಸ್ಟಾಲ್ ಬಿಟ್ಟರೆ ಬೇರೇನೂ ಕಾಣಿಸಲಿಲ್ಲ.
ಅಲ್ಲೋ ಬನ್ ಬಿಟ್ಟರೆ ಇನ್ನೇನು ಇರಲಿಲ್ಲ. ಟೀ ಮಲಬಾರಿಗಳ ಮಸಾಲೆ ವಾಸನೆಗೆ ಅದಾಗಲೇ ಹತ್ತಿರವಾಗಿತ್ತು. ಬನ್ ತಿಂದು ಟೀ ಕುಡಿದೆವು. ಬಿಲ್ ಅಷ್ಟೇ ಮಸಾಲೆ ಹಾಕಿದಷ್ಟೇ ಖಾರವಾಗಿತ್ತು. ತೆತ್ತು ಬಂದು ವೈಟಿಂಗ್ ರೂಂ ನೋಡಿದರೆ ಅದೂ ಭರ್ತಿ. ಹೊರಗೆ ಫ್ಲಾಟ್ ಫಾರಂ ಕಟ್ಟೆಯಲ್ಲೇ ಎಲ್ಲಂದರಲ್ಲಿ ಜಾಗ ಹುಡುಕಿಕೊಂಡು ಹೆಂಗಸರು ಮಕ್ಕಳು, ಮಧ್ಯಮ ವರ್ಗದವರು, ಕೆಳವರ್ಗದವರು ಹಾಗೂ ಮೇಲ್ವರ್ಗದವರೂ ಸಹ ಮನಷ್ಯ ಜೀವಕ್ಕೆ ಯಾವೊಂದು ಬೇಧವಿಲ್ಲವೆಂಬಂತೆ ಅಲ್ಲಲ್ಲಿ ತಮ್ಮ ವಸ್ತ್ರಗಳನ್ನು ಹಾಸಿ ಉರುಳಿಕೊಂಡಿದ್ದಾರೆ. ಕೆಲವರಂತೂ ನ್ಯೂಸ್ ಪೇಪರ್ ಮೇಲೇ ಮಲಗಿದ್ದಾರೆ. ನಾವಿಬ್ಬರೂ ಒಂದು ಗೋಡೆ ಮಗ್ಗುಲು ಹಿಡಿದೆವು. ನನ್ನ ಶಾಲು ಮತ್ತು ಟವೆಲ್ ಉಪಯೋಗಕ್ಕೆ ಬಂದವು. ಸೊಳ್ಳೆಗಳೋ ರಕ್ತ ಹೀರಲು ಮುಂದಾದವು. ಬಾಲಾಜಿ ಕುಳಿತೇ ಇದ್ದ ಜಪಮಾಡುವವನಂತೆ. ನಾನೋ ಮಲಗುವುದು ಏಳುವುದು ಮಾಡುತ್ತಲೆ ಇದ್ದೆ.
ಅಷ್ಟರಲ್ಲಿ, ಉತ್ತರ ಭಾರತದ ಕಡೆಯ ಕಾಲೇಜೊಂದರ ಟೇನೇಜ್ ಹುಡುಗಿಯರ ಗುಂಪೊಂದು ನಮ್ಮ ಸನಿಹಕ್ಕೇ ಬಂದಿತ್ತು. ಸುಮಾರು 25-30 ಹುಡುಗಿಯರ ಗುಂಪದು. ಅವರ ಯುವ ಮಾಸ್ತರ ಆ ಹುಡುಗಿಯರ ಮಧ್ಯೆ ಕುಳಿತು ಕೊಂಡು ಏನೋ ತಮಾಷೆಯ ಕಥೆ ಹೇಳತೊಡಗಿದ್ದ. ಹುಡುಗಿಯರು ಆಗಾಗ್ಗೆ ಅವನ ಹಾಸ್ಯ ಚಟಾಕಿಗಳಿಗೆ ಸ್ಪಂದಿಸುತ್ತಿದ್ದರೆ ನೋಡಲು ಮೋಜೆನಿಸುತ್ತಿತ್ತು. ಅವರಲ್ಲಿ ಬಹುತೇಕ ಪಿಟಿಪಿಟಿ ಟಾಪ್ ಮತ್ತು ಜೀನ್ಸ್ ಪ್ಯಾಂಟ್ ನಲ್ಲಿದ್ದ ಹುಡ್ಗೀರು. ಅವರ ಸ್ಟೈಲೋ ಸ್ಟೈಲು! ಕಿಲಕಿಲ ನಗುವೇ ಚೆಂದ, ಇನ್ನು ಹೇಳುವುದೇನು? ಓಹ್! ಅವರ ತಕ ಪಕ ಡ್ಯಾನ್ಸ್ ಗೆ ಸೊಳ್ಳೆಗಳ ಸಪೋರ್ಟ್ ಸಹ ಇತ್ತಲ್ಲ! ಅವರ ಗುಜರಾತಿ ಬೆರೆತ ಹಿಂದಿ ಪೂರ್ತಿ ಅರ್ಥವಾಗುತ್ತಿರಲಿಲ್ಲ. ಅವರ ಹರೆಯದ ಹುಮ್ಮಸ್ಸಿನ ನೋಟದ ಮುಂದೆ ನಮಗೆ ಸೊಳ್ಳೆ ಕಾಟ ಮರೆತೇ ಹೋಗಿತ್ತು. ಬೆಳಗಿನ ಜಾವ 3-45 ರ ಹೊತ್ತಿಗೆ ಪರಶುರಾಮ್ ಎಕ್ಸ್ ಪ್ರೆಸ್ ನ ಭೋಗಿಗಳು ಮೊದಲ ಫ್ಲಾಟ್ ಫಾರಂನಲ್ಲೆ ಬಂದು ನಿಲ್ಲತೊಡಗಿದವು.
photos Courtesy- URL of respective owners
ಸಂಪೂರ್ಣ ಇ_ಪುಸ್ತಕ ಇಲ್ಲಿದೆ ಓದಿ...
Wednesday, November 3, 2010
ನಾ ಕಂಡ ತಿರುವನಂತಪುರಂ ಮತ್ತು ಕನ್ಯಾಕುಮಾರಿ
(ಒಂದು ಅಪೂರ್ವ ಪ್ರವಾಸ ಕಥನ)-1
ನಾನು ಮೂವತ್ತು ವರ್ಷ ಮೂರು ತಿಂಗಳು ಟೆಲಿಕಾಂ ಇಲಾಖೆಯಲ್ಲಿ ಸೇವೆಸಲ್ಲಿಸಿ ಸ್ವಯಂ ನಿವೃತ್ತಿ ಪಡೆದೆ. ನನ್ನ ಸೇವಾ ಅವಧಿಯಲ್ಲಿ ಅನೇಕ ಅನುಭವಗಳಾಗಿವೆ. ಅವುಗಳಲ್ಲಿ ಕೆಲವಂತು ಬೇಡವೆಂದರೂ ನೆನಪಿನಲ್ಲಿ ಉಳಿದಿವೆ. ಆ ನೆನಪುಗಳಲ್ಲಿ ಸಿಹಿ ಕಹಿ ಎರಡೂ ಇವೆ. ನನಗೆ ತುಂಬ ಸಿಹಿಯೆನಿಸಿ ಸಂತಸ ಸಮಾಧಾನ ನೀಡಿದ ಪ್ರವಾಸಾನುಭವದ ಬಗ್ಗೆ ಈಗ ಹೇಳ ಬಯಸುತ್ತೇನೆ. ಅದು ೧೯೯೮ ಫೆಬ್ರವರಿ ತಿಂಗಳು. ಆಗಷ್ಟೇ ಚಳಿ ಹೋಗುತ್ತಾ ಬೇಸಿಗೆ ಕಾಲಿಡುತ್ತಿದ್ದ ಕಾಲ. ನಮ್ಮ ಆಡಳಿತ ಕಛೇರಿಯಿಂದ ಕೇರಳದ ತಿರುವನಂತಪುರದಲ್ಲಿ ಒಂದು ತಿಂಗಳ ಕಂಪ್ಯೂಟರ್ ಟ್ರೈನಿಂಗ್ ಗೆ ಇಬ್ಬರು ಹಿರಿಯ ನೌಕರರನ್ನು ಕಳುಹಿಸಬೇಕಿತ್ತು. ನಮ್ಮ ಕಿರಿಯ ಲೆಕ್ಕಾಧಿಕಾರಿಗಳೂ ಸೇರಿದಂತೆ ಅದೇಕೋ ಬೇಡವೆಂದು ನಿರಾಕರಿಸಿದವರೇ ಬಹಳ. ಹಾಗೆ ಹೋಗುವ ಅವಕಾಶ ನಂತರದ ಹಿರಿಯ ನೌಕರನಾದ ನನಗೆ ತಾನಾಗಿಯೆ ಒದಗಿಬಂದಿತ್ತು. ನೋಡಿ, ಮೊದಲೇ ನಿಮ್ಮ ಆರೋಗ್ಯ ಸ್ವಲ್ಪ ಸೂಕ್ಷ್ಮ, ಕೇರಳದಲ್ಲಿ ಕಾರಾವಳಿಯ ಉರಿಬಿಸಿಲ ಬೇಗೆ ಆರಂಭವಾಗಿಬಿಡುತ್ತದೆ. ಹೋಗುವ ಮುನ್ನ ಇನ್ನೊಮ್ಮೆ ಯೋಚಿಸಬಾರದೇ ಎಂದೂ ಎಚ್ಚರಿಸಿದ್ದರು ಅವರೆಲ್ಲ. ಆದರೆ, ನನಗೆ ಅದೇನು ಧೈರ್ಯವೋ ಏನೋ ಯಾರ ಮಾತಿಗೂ ಕಿವಿಗೊಡದೇ ಹೊರಟು ನಿಂತಿದ್ದೆ. ನಮ್ಮ ಕಛೇರಿಯಲ್ಲಿ ನಮ್ಮ ಸೆಕ್ಷನ್ನಲ್ಲೇ ಇದ್ದ ಸಹೋದ್ಯೋಗಿ ಬಾಲಾಜಿ ಕೂಡ ಹೊರಡಲು ಸಿದ್ಧನಾದ. ನನಗೆ ಜೊತೆಯಾಗಿದ್ದ.
ಆ ತಿಂಗಳ ೧೫ರಂದು ಶನಿವಾರ ಸಂಜೆ ೫ ಗಂಟೆಯ ಬಸ್ಸಿಗೆ ಹೊರಟು ಆ ರಾತ್ರಿ ಮಂಗಳೂರು ತಲುಪಬೇಕಿತ್ತು. ನಾನು ಎಲ್ಲ ಪೂರ್ವ ಸಿದ್ಧತೆಯೊಂದಿಗೆ ಅಂದು ಸಂಜೆ ೪ ಗಂ. ಮನೆಯಿಂದ ಹೊರಟೆ. ನಮ್ಮ ಮೂವರು ಗಂಡು ಮಕ್ಕಳಲ್ಲಿ ಇಬ್ಬರು ಪುಟ್ಟ ಮಕ್ಕಳಿಗೆ ಟಾಟಾ ಹೇಳಿ, ಮಕ್ಕಳೊಂದಿಗೆ ಹುಷಾರಾಗಿ ಮನೆಯ ಕಡೆ ನೋಡಿಕೋ ಎಂದು ಹೆಂಡತಿಗೆ ಹೇಳಿ, ಲಗ್ಗೇಜಿನ ಸಮೇತ ಪಿ.ಯು.ಸಿ ಓದುತ್ತಿದ್ದ ಹಿರಿಯ ಮಗನೊಂದಿಗೆ ನನ್ನ ಗಾಡಿ ಎಂ ೮೦ ಏರಿ ಬಸ್ ಸ್ಟ್ಯಾಂಡಿಗೆ ಬಂದಿದ್ದೆ. ಮಂಗಳೂರಿನ ಬಸ್ಸು ಬಂದ ಹಾಗೆ ಕಾಣಲಿಲ್ಲ. ಸುತ್ತೆಲ್ಲ ಕಣ್ಣಾಡಿಸಿದೆ ಸಹೋದ್ಯೋಗಿ ಬಾಲಾಜಿಯೂ ಬಂದಿಲ್ಲ ಅಂದುಕೊಂಡೆ.
ಅಷ್ಟರಲ್ಲಿ ಅನ್ನಪೂರ್ಣ ಟ್ರಾವಲ್ಸ್ ಮಿನಿ ಬಸ್ಸು ಎದುರಿನ ಪೆಟ್ರೋಲ್ ಪಂಪ್ ನಲ್ಲಿ ನಿಂತಿತ್ತು. ಅದೇ ಮಂಗಳೂರಿಗೆ ಹೋಗುವುದೆಂದೂ ತಿಳಿಯಿತು. ತಕ್ಷಣ ಅಲ್ಲಿಗೇ ಹೋಗಿ ನೋಡಿದರೆ, ಅದಾಗಲೆ ಬಾಲಾಜಿ ಹಿಂಬದಿಯ ಸೀಟಿನಲ್ಲಿದ್ದುದು ಕಂಡಿತು. ನನಗೆ ಹೇಳಿ ಕಾದಿರಿಸಿದಂತೆ ಮುಂಭಾಗದ ಬಾಗಿಲ ಬದಿಯ ಸೀಟು! ನಾನು ಬಾಲಾಜಿಯನ್ನು ನೋಡಿ ನಕ್ಕು ಮಾತನಾಡಿಸಿದ್ದನ್ನು ಕಂಡ ಕಂಡಕ್ಟರ್ ಸುಮ್ಮನಿರಲಾರದೇ ನಿಮ್ಮ ಹೋಗಿ ಸರ್ ನಿಮ್ಮ ಫ್ರೆಂಡ್ ಜೊತೆ ಕುಳಿತುಕೊಳ್ಳಿ ಎಂದಾಗ, ಅಲ್ಲಿದ್ದವರು ಮುಂದಿನ ಸೀಟಿಗೆ ತಟ್ಟನೆ ಎದ್ದು ಬಂದಿದ್ದರು. ನಾನು ಬಾಲಾಜಿ ಪಕ್ಕ ಕುಳಿತೆ. ಬಸ್ಸಿನ ತುಂಬಾ ಜನ! ತಡೆಯಲಾಗದ ಸೆಖೆ ಬೇರೆ. ಬಸ್ಸು ಹೊರಟರೆ ಸಾಕೆನಿಸಿತ್ತು. ಬಸ್ಸು ಹೊರಡುವ ತನಕ ಗಾಳಿಯಿಲ್ಲದೆ ಹಿಂಸೆಯೇ. ಬಸ್ಸೇನೋ ಹೊರಟಿತು. ಆಗ ಅರಿವಾಯಿತು; ನಮಗೆ ಮುಂದೆ ಬರಬರುತ್ತ ಕ್ರಮಿಸಲಿರುವುದು ಘಾಟ್ ಸೆಕ್ಷನ್ ಪ್ರಯಾಣವೆಂದು. ಆ ಸೆಖೆಯಲ್ಲೂ ಮೈ ನಡುಗಿತೋ ಮನಸ್ಸು ಅಳುಕಿತೋ ...ಅಂತೂ ಎಂಥ ಕೆಲಸ ಮಾಡಿಬಿಟ್ಟೆ! ನನಗಿಂತ ಇಲಾಖೆಯಲ್ಲಿ ಕಿರಿಯ ಸಹೋದ್ಯೋಗಿ ಬಾಲಾಜಿಗೆ ಇಂತಹ ಇಕ್ಕಟ್ಟಿನ ಬಿಕ್ಕಟ್ಟಿನ ಉಸಿರುಗಟ್ಟಿಸುವ ಸಂದರ್ಭ ಸಹಿಸಿಕೊಳ್ಳಲು ವಯಸ್ಸಿದೆಯಲ್ಲ! ನನಗೋ ಕೆಲವೊಮ್ಮೆ ನನ್ನ ಸ್ವಹಿತಕ್ಕಿಂತ ಸ್ನೇಹ ಸಾಹಚರ್ಯೆಯೆ ಮೇಲಾಗಿ ಕಾಡಿಬಿಡುತ್ತದೆ. ಕೊನೆಗೂ ಬಸ್ಸು ಅನ್ನಪೂರ್ಣ ಹೊರಟಾಗ “ಉಸ್” ಎಂದು ನಿಟ್ಟುಸಿರು ಬಿಡುವಂತಾಯ್ತು.
ಇನ್ನೊಂದು ಕಿರಿಕಿರಿಯೆಂದರೆ ಈ ಮಿನಿ ಬಸ್ಸು ಮುಂದೆ ಘಾಟ್ ಸೆಕ್ಷನ್ ನಲ್ಲಿ ನುಸುಳಿ ತಿರುವುಗಳಲ್ಲಿ ಹೊರಳಿ ಸಾಗುತ್ತದೆ; ಅದೂ ಸಂಜೆಗತ್ತಲಲ್ಲಿ. ಅಂತಹದರಲ್ಲಿ ಜನರನ್ನು ತುಂಬಿಸಿಕೊಳ್ಳುತ್ತಲೇ ಇದ್ದಾನೆ ಕಂಡಕ್ಟರ್ ಮಹಾಶಯ. ಆ ಜನರೋ ತಮಗೆ ಇದು ನಿತ್ಯ ಸಹಜವೆಂಬಂತೆ ಎರಡು ಸಾಲಿನ ಸೀಟುಗಳ ಮಧ್ಯೆ ಉದ್ದ ಸಾಲಿನಲ್ಲಿ ನಿಂತು ಒಬ್ಬರ ಹಿಂದೊಬ್ಬರು ಜೋತಾಡಲು ತಯಾರಾಗಿಯೆ ಬಂದಿದ್ದಾರೆ! ಇವರಲ್ಲಿ ಕೆಲವರು ಉಡುಪಿಯವರೆಗೂ ಹೊರಟವರಿದ್ದಾರೆ!! ಮಧ್ಯೆ ಅವರಿಗೆ ಸೀಟು ಸಿಗುವುದೇನು ಗ್ಯಾರಂಟಿ ಇಲ್ಲ. ಒಬ್ಬಾತ ಇದು ಹೊಸತೇನಲ್ಲವೆಂಬಂತೆ ಹೇಳಿದ: ಶಿವಮೊಗ್ಗಾದಿಂದ ಮಂಗಳೂರು ಕಡೆಗೆ ಇದೇ ಕಡೆಯ ಬಸ್ಸು. ಇದು ಹೋಗುವ ಮಾರ್ಗವೆಂದರೆ ಆಗುಂಬೆ ಘಾಟ್ ಸೆಕ್ಷನ್ ನಲ್ಲಿ. ಪ್ರಯಾಣದಲ್ಲಿ ಓದುವ ಅಭ್ಯಾಸ ನನಗೆ. ಬಸ್ಸ್ ನಲ್ಲಿ ಹುಡುಗನೊಬ್ಬ “ಹಾಯ್ ಬೆಂಗಳೂರು” ಪತ್ರಿಕೆ ಮಾರಾಟಕ್ಕೆ ಬಂದ. ಅದನ್ನು ಕೊಂಡು ಹಾಳೆ ತಿರುವ ತೊಡಗಿದೆ. ಅದರಲ್ಲಿ ನಾನು ಮೊದಲು ನೋಡುವುದು “ಬಾಟಮ್ ಐಟಮ್” ರವಿ ಬೆಳಗೆರೆ ತಮ್ಮ ಅನುಭವದ ಮೂಸೆಯಿಂದ ಅಲ್ಲಿ ಬಿಚ್ಚಿಕೊಳ್ಳುತ್ತಾರಲ್ಲ… ನನ್ನ ಎಡ ಪಕ್ಕಕ್ಕೆ ಕುಳಿತವರು ಮಣಿಪಾಲ್ ಕಾರ್ಪೋರೇಷನ್ ಮೇನೇಜರ್. ಮಣಿಪಾಲ್ ಗೇ ಅವರ ಪ್ರಯಾಣ. ಅವರೊಡನೆ ಮಾತು ಮೊಳೆತು ಬೆಳೆದಂತೇ ಒಳ್ಳೇ ಕಂಪೆನಿ ಸಿಕ್ತಿತೆನಿಸಿತು. ಯಾಕೆಂದರೆ, ನನ್ನ ಜೊತೆಗಿದ್ದ ಬಾಲಾಜಿ ಅಷ್ಟು ಮಾತುಗಾರನಲ್ಲ. ನನ್ನ ವೈಚಾರಿಕತೆಯೂ ಕೆಲವೊಮ್ಮೆ ಅವನಿಗೆ ಹಿಡಿಸಲಾರದೇನೋ…
ಬಸ್ಸು ತೀರ್ಥಹಳ್ಳಿಯನ್ನು ಸಮೀಪಿಸುತ್ತಿತ್ತು. ಓಹ್, ನನ್ನ ದೈಹಿಕ ಜಲಭಾದೆಯ ತುರ್ತು ಶುರುವಾಗಿತ್ತು. ಪ್ರಾಯಶಃ ನನಗೆ ಪ್ರಯಾಣದಲ್ಲಿ ಇದು ಮೊದಲ ಅನುಭವ. ಪಕ್ಕದಲ್ಲಿ ಅಡ್ಡ ಪಂಚೆ ಕಟ್ಟಿಕೊಂಡು ನಿಂತಿದ್ದ ಮನುಷ್ಯ ಘಟ್ಟದ ಕೆಳಗಿನವನು. ಆತನಿಗೆ ಕೇಳಿದೆ- “ ಬಸ್ಸು ಮುಂದೆಲ್ಲಿ ನಿಲ್ಲುತ್ತದೆ?” “ಮುಂದೆ ಬರುವ ಆಗುಂಬೆ ಘಾಟ್ ಇಳಿಯಬೇಕಲ್ಲ; ಸಂಜೆಗತ್ತಲು ಕಳೆಯುವುದರೊಳಗೇ, ಘಟ್ಟ ಇಳಿಯುವವರೆಗೆ ಎಲ್ಲೂ ನಿಲ್ಲುವುದಿಲ್ಲವೆನ್ನಬೇಕೇ…!
ತೀರ್ಥಹಳ್ಳಿಯಲ್ಲಿ…?” ಹುಬ್ಬೇರಿಸಿ ಮತ್ತೆ ಕೇಳಿದೆ. “ಉಹೂಂ...” ಇಲ್ಲವೆಂದು ತಲೆಯಾಡಿಸಿದ್ದ. ಹೊಯ್! ನನ್ನ ಜಲಭಾದೆ ಇನ್ನೂ ತೀವ್ರವಾಗಿ ಕಾಡಿತ್ತು. ಎಲಾ ತಿರುಪತಿ ವೆಂಕಟ ರಮಣನೇ ನೀನೇ ಈ ಸಂಕಟ ಪರಿಹರಿಸಬೇಕು, ಅಷ್ಟಕ್ಕೂ ನಾನು ಧೈರ್ಯ ಮಾಡದಿದ್ದರೆ ಅವನೇನು ಮಾಡಿಯಾನು? ತೀರ್ಥ ಹಳ್ಳಿ ಬಂದೇ ಬಂತು....ನಾನು ಏಳಬೇಕೆನ್ನುವಷ್ಟರಲ್ಲಿ,
ಆತ ಹೇಳಿದಂತೆಯೆ ಬಸ್ ಸ್ಟ್ಯಾಂಡಿನಲ್ಲಿ ನಿಂತಂತೆ ಮಾಡಿ ಹೊರಟೇ ಬಿಟ್ಟಿತು ನಮ್ಮ ಬಸ್ಸು ಅನ್ನಪೂರ್ಣ! ಹೇಗೆ ಕಟ್ಟಿ ಹಾಕಲಿ ಡೀಸೆಂಟಾಗಿ ನಾನು ನನ್ನ ಪಾಪಿ ದೇಹವನ್ನಿಲ್ಲಿ…? ಯಾಕೆ ಡೀಸೆಂಟಾಗಿ ಎಂದು ಹೇಳಿದೆನೆಂದು ಕೇಳುವಿರೇನು? ಹಳೆಯ ಘಟನೆಯೊಂದು ನೆನಪಿಗೆ ಬಂತು. ಇದೇ ತೀರ್ಥಹಳ್ಳಿಯ ತುಂಗಾ ಮಹಾ ವಿದ್ಯಾಲಯಕ್ಕೆ ಮುಖ್ಯ ಅತಿಥಿಯಾಗಿ ಒಂದು ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದರು. ಆ ಸಮಾರಂಭ ಮುಗಿದು ಮರಳಿ ಶಿವಮೊಗ್ಗಾಕ್ಕೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದೆ. ಆಗ ಬಸ್ ನಲ್ಲೇ ಕಂಡದ್ದನ್ನು ಹೇಳಿದರೆ ನೀವು ಬಂಬಲಾರಿರಿ. ಏನಾಯಿತೆಂದರೆ, ಪಾಪ ಒಬ್ಬ ಹಳ್ಳಿ ಹೈದ. ನೋಡಲು ಸಭ್ಯನಂತೇ ಕಾಣುತ್ತಾನೆ. ತನ್ನ ಲುಂಗಿ ಪಂಚೆಯನ್ನೆತ್ತಿ ಮೊಣಕಾಲವರೆಗೆ ಕಟ್ಟಿಕೊಂಡಿದ್ದಾನೆ. ಮೇಲ್ಕಂಬಿ ಹಿಡಕ್ಕೊಂಡು ಜೋತಾಡುತ್ತಾ ನಿಂತವನು ಇದ್ದಕ್ಕಿದ್ದಂತೆ ತನ್ನ ಪಂಚೆಯೋಳಗಿಂದ ನೀರು ಚುರ್ರನೆ ಬಿಟ್ಟೇ ಬಿಟ್ಟ….! ಎಲ ಎಲಾ ಕತ್ತೆಗೂ ಈ ಮನುಷ್ಯನಿಗೂ ಏನೇನೂ ವ್ಯತ್ಯಾಸವಿಲ್ಲವಲ್ಲ. ಕಂಡಕ್ಟ್ ರ್ ಥೂತ್ ತೇರಿಕೆ ಅಂತ ಗೊಣಗಿದ. “ನಾ ಕೂಗಿದ್ರ ನೀನೇನ್ನ ನಿಲ್ಲಿಸ್ತಿದ್ದೇನೂ….” ಅವನೆಂದ ಮೂತಿ ಸೊಟ್ಟಗೆ ಮಾಡಿ. ಏನ್ ಕೂಗ್ತೀ ನಿನ್ನ ತಲಿ…. ನೀನೆಂಥ ಮನುಷ್ಯನಯ್ಯ ! ಗೊಣಗಿದ ಕಂಡಕ್ಟರ್ ಅವನಿಗೊಂದಿಷ್ಟು ಉಗಿದ ಎಲ್ಲಿಂದಲೋ ಒಂದು ಬಾಟಲಿ ನೀರು ತಂದು ಅಲ್ಲಿ ಸುರುವಿದ್ದನಷ್ಟೇ ಎಲ್ಲಿ ವಾಸನೆ ಬಸ್ಸೆಲ್ಲಾ ಆವರಿಸೀತೋ ಎಂದು.
ಈಗ ಮುಂದೆ ಕೇಳಿ ನನ್ನ ಡೀಸೆಂಟ್ ಅವಸ್ಥೆನಾ….
ಇನ್ನೇನು, ಈ ಬಸ್ಸು ಅನ್ನಪೂರ್ಣ ತೀರ್ಥಹಳ್ಳಿಯ ಗಡಿಯನ್ನೂ ಬಿಡಲಿದ್ದಾಳೆ. ಆಗ ಯಾಕೋ ಮುಖ್ಯ ರಸ್ತೆಯಲ್ಲೇ ಗಕ್ಕನೆ ನಿಂತಳಲ್ಲ ನಾನೂ ತಟ್ಟನೆ ಚುರುಕಾದೆ.....
ನಾನು ಹಿಂದೆ ಕುಳಿತಿದ್ದೆನಲ್ಲ, ಸಾಲಾಗಿ ನಿಂತು ಜೋತಾಡಲಿರುವ ಜನರನ್ನೆಲ್ಲ ಸರಸರನೆ ತಳ್ಳಿ ದಾರಿ ಮಾಡಿಕೊಳ್ಳುತ್ತ ಹೊರಬೀಳುವ ಮುನ್ನ ಎದುರಿಗೆ ಸಿಕ್ಕ ಕಂಡಕ್ಟರ್ ಗೆ ಸನ್ನೆ ಮಾಡಿ ನನ್ನ ಅವಸ್ಥೆ ಹೇಳಿಕೊಂಡೆ. “ಹೋಗ್ ಬನ್ರಿ ಬೇಗಾ..” ಅಂದ ಅಸಹನೆಯಿಂದ. ಎಲ್ಲಿಗೆ ಹೋಗೋದು? “ಮೂತ್ರಿ” ಎಂಬುದೆಲ್ಲಿದೆಯೋ ಕಾಣಸುತ್ತಿಲ್ಲ! ಧೈರ್ಯವೋ ಧೈರ್ಯ ನಂದು. ಇನ್ನೊಂದೆರಡು ಹೆಜ್ಚೆ ಮುಂದೆ ನಡೆದೇ ಬಿಟ್ಟೆ. ಅಲ್ಲೇ ಪೆಟ್ಟಿಗೆ ಅಂಗಡಿಗಳ ಮಧ್ಯೆ ಕಾಣಿಸಿತು ಎಂತದೋ ಕೊಳಕು ವಾಸನೆಯದು. ಸಧ್ಯ ಅದೇ ಸಾಕಾಗಿತ್ತು. ಓಡಿ ಹೋಗಿ ನಿಂತೆನಲ್ಲಿ; ದೇಹ ಹಗುರವಾಯ್ತು. ಪ್ಯಾಂಟು ಜಿಪ್ ಎಳೆದು ತಿರುಗಿ ಬಂದರೆ ಬಸ್ಸೆಲ್ಲಿ ? ಕಾಣಿಸಲೇ ಇಲ್ಲ! ಅಯ್ಯ! ಅದ್ಹೇಗೆ ಹೇಳಿದ್ದರೂ ನನ್ನ ಬಿಟ್ಟು ಹೋಗ್ಬಿಡ್ತಾನೆ! ನನ್ನ ಸ್ನೇಹಿತ ಬೇರೆ ಒಳಗಿದ್ದಾನಲ್ಲ; ಅವನಿಗೆ ಹೇಳಲಿಕ್ಕೇ. ಓಹ್ ಅದು ಅಲ್ಲೇ ದೂರದಲ್ಲಿ ನಿಂತಿದೆ! ಓಡೋಡಿ ಹೋಗಿ ಹತ್ತಿಕೊಂಡೆ. ನಿರಾಳ ನಿಟ್ಟುಸಿರಿಟ್ಟೆ… “ಅಂತೂ ಮುಗಿಸ್ಕೊಂಡ್ ಬಂದ್ರಿ ಈಗ ಆರಾಮಾಗಿ ಕೂತ್ಕೊಳ್ಳಿ ಎಂದರು ಪಕ್ಕದಲ್ಲಿದ್ದ ಮೇನೇಜರ್ ಸಾಹೇಬರು. ನಾನು ಇಳಿದು ಹೋದದ್ದಕ್ಕೆ ಜನ, ಯಾಕೆ ನಿಲ್ಸಿದಾರೆ ಬಸ್ಸು, ಲೇಟಾಗತ್ತೇಂತ ಕೂಗ್ತಾ ಇದ್ರಂತೆ! ಅಲ್ಲಾ, ಎಂಥ ಬಹುತೇಕ ಜನರೇ ಹೀಗಲ್ಲವೇ…ತಮ್ಮದಾದ್ರೆ ಕಷ್ಟ, ಇತರರದಾದ್ರೆ ಏನೂ ಅಲ್ಲ...ಅಲ್ಲಾ ಇದೇನ್ರಿ ನಿಮ್ಮದು ಪ್ರವಾಸ ಕಥನ ಜಲಭಾದೆಯಿಂದಲೇ ಆರಂಭವಾಗಬೇಕೇ… ಸಹಿಯಾದ ಅನುಭವ ಆಗಿದೇಂತಿರಾ, ಆರಂಭದಲ್ಲೇ ನಿಮ್ಮ ಕಹಿ ಅನುಭವ ಮುಂದಿಡ್ತೀರಲ್ಲ ಎನ್ನದಿರಿ. ಯಾಕಂದ್ರೆ ಮೊದಲು ಒಂಚೂರು ಪಾರಾದ್ರು ಕಹಿಯಿದ್ದರೇನೆ ಆಮೇಲೆ ಸಿಹಿ ರುಚಿಸೋದು ಏನಂತೀರಿ…? ಆಗುಂಬೆ ಘಾಟ್ ಸೆಕ್ಷನ್ ಬಂತು. ಬಸ್ಸು ಘಟ್ಟ ಇಳಿಯತೊಡಗಿತು. ಪಕ್ಕದಲ್ಲಿ ನಿಂತು ಘಟ್ಟ ತಗ್ಗಿನ ಹಿರಿಯಡ್ಕಕ್ಕೆ ಪ್ರಯಾಣಿಸು ತ್ತಿದ್ದಾತನಿಗೆ ಕೇಳಿದೆ- “ಎಷ್ಟು ನಿಮಿಷ ತಗೊಳ್ತಾನೆ; ಘಾಟ್ ಇಳಿಯಲಿಕ್ಕೇ? ಆತ 15 ನಿಮಿಷ ಸಾಕು” ಎಂದ. ಹತ್ತಲಿಕ್ಕೆ 25ರಿಂದ 30 ನಿಮಿಷ ಬೇಕು ಎಂದ. ಓಹ್! ಎಂದೆ.
ಮುಂದುವರೆಯವುದು...
ಆ ತಿಂಗಳ ೧೫ರಂದು ಶನಿವಾರ ಸಂಜೆ ೫ ಗಂಟೆಯ ಬಸ್ಸಿಗೆ ಹೊರಟು ಆ ರಾತ್ರಿ ಮಂಗಳೂರು ತಲುಪಬೇಕಿತ್ತು. ನಾನು ಎಲ್ಲ ಪೂರ್ವ ಸಿದ್ಧತೆಯೊಂದಿಗೆ ಅಂದು ಸಂಜೆ ೪ ಗಂ. ಮನೆಯಿಂದ ಹೊರಟೆ. ನಮ್ಮ ಮೂವರು ಗಂಡು ಮಕ್ಕಳಲ್ಲಿ ಇಬ್ಬರು ಪುಟ್ಟ ಮಕ್ಕಳಿಗೆ ಟಾಟಾ ಹೇಳಿ, ಮಕ್ಕಳೊಂದಿಗೆ ಹುಷಾರಾಗಿ ಮನೆಯ ಕಡೆ ನೋಡಿಕೋ ಎಂದು ಹೆಂಡತಿಗೆ ಹೇಳಿ, ಲಗ್ಗೇಜಿನ ಸಮೇತ ಪಿ.ಯು.ಸಿ ಓದುತ್ತಿದ್ದ ಹಿರಿಯ ಮಗನೊಂದಿಗೆ ನನ್ನ ಗಾಡಿ ಎಂ ೮೦ ಏರಿ ಬಸ್ ಸ್ಟ್ಯಾಂಡಿಗೆ ಬಂದಿದ್ದೆ. ಮಂಗಳೂರಿನ ಬಸ್ಸು ಬಂದ ಹಾಗೆ ಕಾಣಲಿಲ್ಲ. ಸುತ್ತೆಲ್ಲ ಕಣ್ಣಾಡಿಸಿದೆ ಸಹೋದ್ಯೋಗಿ ಬಾಲಾಜಿಯೂ ಬಂದಿಲ್ಲ ಅಂದುಕೊಂಡೆ.
ಅಷ್ಟರಲ್ಲಿ ಅನ್ನಪೂರ್ಣ ಟ್ರಾವಲ್ಸ್ ಮಿನಿ ಬಸ್ಸು ಎದುರಿನ ಪೆಟ್ರೋಲ್ ಪಂಪ್ ನಲ್ಲಿ ನಿಂತಿತ್ತು. ಅದೇ ಮಂಗಳೂರಿಗೆ ಹೋಗುವುದೆಂದೂ ತಿಳಿಯಿತು. ತಕ್ಷಣ ಅಲ್ಲಿಗೇ ಹೋಗಿ ನೋಡಿದರೆ, ಅದಾಗಲೆ ಬಾಲಾಜಿ ಹಿಂಬದಿಯ ಸೀಟಿನಲ್ಲಿದ್ದುದು ಕಂಡಿತು. ನನಗೆ ಹೇಳಿ ಕಾದಿರಿಸಿದಂತೆ ಮುಂಭಾಗದ ಬಾಗಿಲ ಬದಿಯ ಸೀಟು! ನಾನು ಬಾಲಾಜಿಯನ್ನು ನೋಡಿ ನಕ್ಕು ಮಾತನಾಡಿಸಿದ್ದನ್ನು ಕಂಡ ಕಂಡಕ್ಟರ್ ಸುಮ್ಮನಿರಲಾರದೇ ನಿಮ್ಮ ಹೋಗಿ ಸರ್ ನಿಮ್ಮ ಫ್ರೆಂಡ್ ಜೊತೆ ಕುಳಿತುಕೊಳ್ಳಿ ಎಂದಾಗ, ಅಲ್ಲಿದ್ದವರು ಮುಂದಿನ ಸೀಟಿಗೆ ತಟ್ಟನೆ ಎದ್ದು ಬಂದಿದ್ದರು. ನಾನು ಬಾಲಾಜಿ ಪಕ್ಕ ಕುಳಿತೆ. ಬಸ್ಸಿನ ತುಂಬಾ ಜನ! ತಡೆಯಲಾಗದ ಸೆಖೆ ಬೇರೆ. ಬಸ್ಸು ಹೊರಟರೆ ಸಾಕೆನಿಸಿತ್ತು. ಬಸ್ಸು ಹೊರಡುವ ತನಕ ಗಾಳಿಯಿಲ್ಲದೆ ಹಿಂಸೆಯೇ. ಬಸ್ಸೇನೋ ಹೊರಟಿತು. ಆಗ ಅರಿವಾಯಿತು; ನಮಗೆ ಮುಂದೆ ಬರಬರುತ್ತ ಕ್ರಮಿಸಲಿರುವುದು ಘಾಟ್ ಸೆಕ್ಷನ್ ಪ್ರಯಾಣವೆಂದು. ಆ ಸೆಖೆಯಲ್ಲೂ ಮೈ ನಡುಗಿತೋ ಮನಸ್ಸು ಅಳುಕಿತೋ ...ಅಂತೂ ಎಂಥ ಕೆಲಸ ಮಾಡಿಬಿಟ್ಟೆ! ನನಗಿಂತ ಇಲಾಖೆಯಲ್ಲಿ ಕಿರಿಯ ಸಹೋದ್ಯೋಗಿ ಬಾಲಾಜಿಗೆ ಇಂತಹ ಇಕ್ಕಟ್ಟಿನ ಬಿಕ್ಕಟ್ಟಿನ ಉಸಿರುಗಟ್ಟಿಸುವ ಸಂದರ್ಭ ಸಹಿಸಿಕೊಳ್ಳಲು ವಯಸ್ಸಿದೆಯಲ್ಲ! ನನಗೋ ಕೆಲವೊಮ್ಮೆ ನನ್ನ ಸ್ವಹಿತಕ್ಕಿಂತ ಸ್ನೇಹ ಸಾಹಚರ್ಯೆಯೆ ಮೇಲಾಗಿ ಕಾಡಿಬಿಡುತ್ತದೆ. ಕೊನೆಗೂ ಬಸ್ಸು ಅನ್ನಪೂರ್ಣ ಹೊರಟಾಗ “ಉಸ್” ಎಂದು ನಿಟ್ಟುಸಿರು ಬಿಡುವಂತಾಯ್ತು.
ಇನ್ನೊಂದು ಕಿರಿಕಿರಿಯೆಂದರೆ ಈ ಮಿನಿ ಬಸ್ಸು ಮುಂದೆ ಘಾಟ್ ಸೆಕ್ಷನ್ ನಲ್ಲಿ ನುಸುಳಿ ತಿರುವುಗಳಲ್ಲಿ ಹೊರಳಿ ಸಾಗುತ್ತದೆ; ಅದೂ ಸಂಜೆಗತ್ತಲಲ್ಲಿ. ಅಂತಹದರಲ್ಲಿ ಜನರನ್ನು ತುಂಬಿಸಿಕೊಳ್ಳುತ್ತಲೇ ಇದ್ದಾನೆ ಕಂಡಕ್ಟರ್ ಮಹಾಶಯ. ಆ ಜನರೋ ತಮಗೆ ಇದು ನಿತ್ಯ ಸಹಜವೆಂಬಂತೆ ಎರಡು ಸಾಲಿನ ಸೀಟುಗಳ ಮಧ್ಯೆ ಉದ್ದ ಸಾಲಿನಲ್ಲಿ ನಿಂತು ಒಬ್ಬರ ಹಿಂದೊಬ್ಬರು ಜೋತಾಡಲು ತಯಾರಾಗಿಯೆ ಬಂದಿದ್ದಾರೆ! ಇವರಲ್ಲಿ ಕೆಲವರು ಉಡುಪಿಯವರೆಗೂ ಹೊರಟವರಿದ್ದಾರೆ!! ಮಧ್ಯೆ ಅವರಿಗೆ ಸೀಟು ಸಿಗುವುದೇನು ಗ್ಯಾರಂಟಿ ಇಲ್ಲ. ಒಬ್ಬಾತ ಇದು ಹೊಸತೇನಲ್ಲವೆಂಬಂತೆ ಹೇಳಿದ: ಶಿವಮೊಗ್ಗಾದಿಂದ ಮಂಗಳೂರು ಕಡೆಗೆ ಇದೇ ಕಡೆಯ ಬಸ್ಸು. ಇದು ಹೋಗುವ ಮಾರ್ಗವೆಂದರೆ ಆಗುಂಬೆ ಘಾಟ್ ಸೆಕ್ಷನ್ ನಲ್ಲಿ. ಪ್ರಯಾಣದಲ್ಲಿ ಓದುವ ಅಭ್ಯಾಸ ನನಗೆ. ಬಸ್ಸ್ ನಲ್ಲಿ ಹುಡುಗನೊಬ್ಬ “ಹಾಯ್ ಬೆಂಗಳೂರು” ಪತ್ರಿಕೆ ಮಾರಾಟಕ್ಕೆ ಬಂದ. ಅದನ್ನು ಕೊಂಡು ಹಾಳೆ ತಿರುವ ತೊಡಗಿದೆ. ಅದರಲ್ಲಿ ನಾನು ಮೊದಲು ನೋಡುವುದು “ಬಾಟಮ್ ಐಟಮ್” ರವಿ ಬೆಳಗೆರೆ ತಮ್ಮ ಅನುಭವದ ಮೂಸೆಯಿಂದ ಅಲ್ಲಿ ಬಿಚ್ಚಿಕೊಳ್ಳುತ್ತಾರಲ್ಲ… ನನ್ನ ಎಡ ಪಕ್ಕಕ್ಕೆ ಕುಳಿತವರು ಮಣಿಪಾಲ್ ಕಾರ್ಪೋರೇಷನ್ ಮೇನೇಜರ್. ಮಣಿಪಾಲ್ ಗೇ ಅವರ ಪ್ರಯಾಣ. ಅವರೊಡನೆ ಮಾತು ಮೊಳೆತು ಬೆಳೆದಂತೇ ಒಳ್ಳೇ ಕಂಪೆನಿ ಸಿಕ್ತಿತೆನಿಸಿತು. ಯಾಕೆಂದರೆ, ನನ್ನ ಜೊತೆಗಿದ್ದ ಬಾಲಾಜಿ ಅಷ್ಟು ಮಾತುಗಾರನಲ್ಲ. ನನ್ನ ವೈಚಾರಿಕತೆಯೂ ಕೆಲವೊಮ್ಮೆ ಅವನಿಗೆ ಹಿಡಿಸಲಾರದೇನೋ…
ಬಸ್ಸು ತೀರ್ಥಹಳ್ಳಿಯನ್ನು ಸಮೀಪಿಸುತ್ತಿತ್ತು. ಓಹ್, ನನ್ನ ದೈಹಿಕ ಜಲಭಾದೆಯ ತುರ್ತು ಶುರುವಾಗಿತ್ತು. ಪ್ರಾಯಶಃ ನನಗೆ ಪ್ರಯಾಣದಲ್ಲಿ ಇದು ಮೊದಲ ಅನುಭವ. ಪಕ್ಕದಲ್ಲಿ ಅಡ್ಡ ಪಂಚೆ ಕಟ್ಟಿಕೊಂಡು ನಿಂತಿದ್ದ ಮನುಷ್ಯ ಘಟ್ಟದ ಕೆಳಗಿನವನು. ಆತನಿಗೆ ಕೇಳಿದೆ- “ ಬಸ್ಸು ಮುಂದೆಲ್ಲಿ ನಿಲ್ಲುತ್ತದೆ?” “ಮುಂದೆ ಬರುವ ಆಗುಂಬೆ ಘಾಟ್ ಇಳಿಯಬೇಕಲ್ಲ; ಸಂಜೆಗತ್ತಲು ಕಳೆಯುವುದರೊಳಗೇ, ಘಟ್ಟ ಇಳಿಯುವವರೆಗೆ ಎಲ್ಲೂ ನಿಲ್ಲುವುದಿಲ್ಲವೆನ್ನಬೇಕೇ…!
ತೀರ್ಥಹಳ್ಳಿಯಲ್ಲಿ…?” ಹುಬ್ಬೇರಿಸಿ ಮತ್ತೆ ಕೇಳಿದೆ. “ಉಹೂಂ...” ಇಲ್ಲವೆಂದು ತಲೆಯಾಡಿಸಿದ್ದ. ಹೊಯ್! ನನ್ನ ಜಲಭಾದೆ ಇನ್ನೂ ತೀವ್ರವಾಗಿ ಕಾಡಿತ್ತು. ಎಲಾ ತಿರುಪತಿ ವೆಂಕಟ ರಮಣನೇ ನೀನೇ ಈ ಸಂಕಟ ಪರಿಹರಿಸಬೇಕು, ಅಷ್ಟಕ್ಕೂ ನಾನು ಧೈರ್ಯ ಮಾಡದಿದ್ದರೆ ಅವನೇನು ಮಾಡಿಯಾನು? ತೀರ್ಥ ಹಳ್ಳಿ ಬಂದೇ ಬಂತು....ನಾನು ಏಳಬೇಕೆನ್ನುವಷ್ಟರಲ್ಲಿ,
ಆತ ಹೇಳಿದಂತೆಯೆ ಬಸ್ ಸ್ಟ್ಯಾಂಡಿನಲ್ಲಿ ನಿಂತಂತೆ ಮಾಡಿ ಹೊರಟೇ ಬಿಟ್ಟಿತು ನಮ್ಮ ಬಸ್ಸು ಅನ್ನಪೂರ್ಣ! ಹೇಗೆ ಕಟ್ಟಿ ಹಾಕಲಿ ಡೀಸೆಂಟಾಗಿ ನಾನು ನನ್ನ ಪಾಪಿ ದೇಹವನ್ನಿಲ್ಲಿ…? ಯಾಕೆ ಡೀಸೆಂಟಾಗಿ ಎಂದು ಹೇಳಿದೆನೆಂದು ಕೇಳುವಿರೇನು? ಹಳೆಯ ಘಟನೆಯೊಂದು ನೆನಪಿಗೆ ಬಂತು. ಇದೇ ತೀರ್ಥಹಳ್ಳಿಯ ತುಂಗಾ ಮಹಾ ವಿದ್ಯಾಲಯಕ್ಕೆ ಮುಖ್ಯ ಅತಿಥಿಯಾಗಿ ಒಂದು ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದರು. ಆ ಸಮಾರಂಭ ಮುಗಿದು ಮರಳಿ ಶಿವಮೊಗ್ಗಾಕ್ಕೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದೆ. ಆಗ ಬಸ್ ನಲ್ಲೇ ಕಂಡದ್ದನ್ನು ಹೇಳಿದರೆ ನೀವು ಬಂಬಲಾರಿರಿ. ಏನಾಯಿತೆಂದರೆ, ಪಾಪ ಒಬ್ಬ ಹಳ್ಳಿ ಹೈದ. ನೋಡಲು ಸಭ್ಯನಂತೇ ಕಾಣುತ್ತಾನೆ. ತನ್ನ ಲುಂಗಿ ಪಂಚೆಯನ್ನೆತ್ತಿ ಮೊಣಕಾಲವರೆಗೆ ಕಟ್ಟಿಕೊಂಡಿದ್ದಾನೆ. ಮೇಲ್ಕಂಬಿ ಹಿಡಕ್ಕೊಂಡು ಜೋತಾಡುತ್ತಾ ನಿಂತವನು ಇದ್ದಕ್ಕಿದ್ದಂತೆ ತನ್ನ ಪಂಚೆಯೋಳಗಿಂದ ನೀರು ಚುರ್ರನೆ ಬಿಟ್ಟೇ ಬಿಟ್ಟ….! ಎಲ ಎಲಾ ಕತ್ತೆಗೂ ಈ ಮನುಷ್ಯನಿಗೂ ಏನೇನೂ ವ್ಯತ್ಯಾಸವಿಲ್ಲವಲ್ಲ. ಕಂಡಕ್ಟ್ ರ್ ಥೂತ್ ತೇರಿಕೆ ಅಂತ ಗೊಣಗಿದ. “ನಾ ಕೂಗಿದ್ರ ನೀನೇನ್ನ ನಿಲ್ಲಿಸ್ತಿದ್ದೇನೂ….” ಅವನೆಂದ ಮೂತಿ ಸೊಟ್ಟಗೆ ಮಾಡಿ. ಏನ್ ಕೂಗ್ತೀ ನಿನ್ನ ತಲಿ…. ನೀನೆಂಥ ಮನುಷ್ಯನಯ್ಯ ! ಗೊಣಗಿದ ಕಂಡಕ್ಟರ್ ಅವನಿಗೊಂದಿಷ್ಟು ಉಗಿದ ಎಲ್ಲಿಂದಲೋ ಒಂದು ಬಾಟಲಿ ನೀರು ತಂದು ಅಲ್ಲಿ ಸುರುವಿದ್ದನಷ್ಟೇ ಎಲ್ಲಿ ವಾಸನೆ ಬಸ್ಸೆಲ್ಲಾ ಆವರಿಸೀತೋ ಎಂದು.
ಈಗ ಮುಂದೆ ಕೇಳಿ ನನ್ನ ಡೀಸೆಂಟ್ ಅವಸ್ಥೆನಾ….
ಇನ್ನೇನು, ಈ ಬಸ್ಸು ಅನ್ನಪೂರ್ಣ ತೀರ್ಥಹಳ್ಳಿಯ ಗಡಿಯನ್ನೂ ಬಿಡಲಿದ್ದಾಳೆ. ಆಗ ಯಾಕೋ ಮುಖ್ಯ ರಸ್ತೆಯಲ್ಲೇ ಗಕ್ಕನೆ ನಿಂತಳಲ್ಲ ನಾನೂ ತಟ್ಟನೆ ಚುರುಕಾದೆ.....
ನಾನು ಹಿಂದೆ ಕುಳಿತಿದ್ದೆನಲ್ಲ, ಸಾಲಾಗಿ ನಿಂತು ಜೋತಾಡಲಿರುವ ಜನರನ್ನೆಲ್ಲ ಸರಸರನೆ ತಳ್ಳಿ ದಾರಿ ಮಾಡಿಕೊಳ್ಳುತ್ತ ಹೊರಬೀಳುವ ಮುನ್ನ ಎದುರಿಗೆ ಸಿಕ್ಕ ಕಂಡಕ್ಟರ್ ಗೆ ಸನ್ನೆ ಮಾಡಿ ನನ್ನ ಅವಸ್ಥೆ ಹೇಳಿಕೊಂಡೆ. “ಹೋಗ್ ಬನ್ರಿ ಬೇಗಾ..” ಅಂದ ಅಸಹನೆಯಿಂದ. ಎಲ್ಲಿಗೆ ಹೋಗೋದು? “ಮೂತ್ರಿ” ಎಂಬುದೆಲ್ಲಿದೆಯೋ ಕಾಣಸುತ್ತಿಲ್ಲ! ಧೈರ್ಯವೋ ಧೈರ್ಯ ನಂದು. ಇನ್ನೊಂದೆರಡು ಹೆಜ್ಚೆ ಮುಂದೆ ನಡೆದೇ ಬಿಟ್ಟೆ. ಅಲ್ಲೇ ಪೆಟ್ಟಿಗೆ ಅಂಗಡಿಗಳ ಮಧ್ಯೆ ಕಾಣಿಸಿತು ಎಂತದೋ ಕೊಳಕು ವಾಸನೆಯದು. ಸಧ್ಯ ಅದೇ ಸಾಕಾಗಿತ್ತು. ಓಡಿ ಹೋಗಿ ನಿಂತೆನಲ್ಲಿ; ದೇಹ ಹಗುರವಾಯ್ತು. ಪ್ಯಾಂಟು ಜಿಪ್ ಎಳೆದು ತಿರುಗಿ ಬಂದರೆ ಬಸ್ಸೆಲ್ಲಿ ? ಕಾಣಿಸಲೇ ಇಲ್ಲ! ಅಯ್ಯ! ಅದ್ಹೇಗೆ ಹೇಳಿದ್ದರೂ ನನ್ನ ಬಿಟ್ಟು ಹೋಗ್ಬಿಡ್ತಾನೆ! ನನ್ನ ಸ್ನೇಹಿತ ಬೇರೆ ಒಳಗಿದ್ದಾನಲ್ಲ; ಅವನಿಗೆ ಹೇಳಲಿಕ್ಕೇ. ಓಹ್ ಅದು ಅಲ್ಲೇ ದೂರದಲ್ಲಿ ನಿಂತಿದೆ! ಓಡೋಡಿ ಹೋಗಿ ಹತ್ತಿಕೊಂಡೆ. ನಿರಾಳ ನಿಟ್ಟುಸಿರಿಟ್ಟೆ… “ಅಂತೂ ಮುಗಿಸ್ಕೊಂಡ್ ಬಂದ್ರಿ ಈಗ ಆರಾಮಾಗಿ ಕೂತ್ಕೊಳ್ಳಿ ಎಂದರು ಪಕ್ಕದಲ್ಲಿದ್ದ ಮೇನೇಜರ್ ಸಾಹೇಬರು. ನಾನು ಇಳಿದು ಹೋದದ್ದಕ್ಕೆ ಜನ, ಯಾಕೆ ನಿಲ್ಸಿದಾರೆ ಬಸ್ಸು, ಲೇಟಾಗತ್ತೇಂತ ಕೂಗ್ತಾ ಇದ್ರಂತೆ! ಅಲ್ಲಾ, ಎಂಥ ಬಹುತೇಕ ಜನರೇ ಹೀಗಲ್ಲವೇ…ತಮ್ಮದಾದ್ರೆ ಕಷ್ಟ, ಇತರರದಾದ್ರೆ ಏನೂ ಅಲ್ಲ...ಅಲ್ಲಾ ಇದೇನ್ರಿ ನಿಮ್ಮದು ಪ್ರವಾಸ ಕಥನ ಜಲಭಾದೆಯಿಂದಲೇ ಆರಂಭವಾಗಬೇಕೇ… ಸಹಿಯಾದ ಅನುಭವ ಆಗಿದೇಂತಿರಾ, ಆರಂಭದಲ್ಲೇ ನಿಮ್ಮ ಕಹಿ ಅನುಭವ ಮುಂದಿಡ್ತೀರಲ್ಲ ಎನ್ನದಿರಿ. ಯಾಕಂದ್ರೆ ಮೊದಲು ಒಂಚೂರು ಪಾರಾದ್ರು ಕಹಿಯಿದ್ದರೇನೆ ಆಮೇಲೆ ಸಿಹಿ ರುಚಿಸೋದು ಏನಂತೀರಿ…? ಆಗುಂಬೆ ಘಾಟ್ ಸೆಕ್ಷನ್ ಬಂತು. ಬಸ್ಸು ಘಟ್ಟ ಇಳಿಯತೊಡಗಿತು. ಪಕ್ಕದಲ್ಲಿ ನಿಂತು ಘಟ್ಟ ತಗ್ಗಿನ ಹಿರಿಯಡ್ಕಕ್ಕೆ ಪ್ರಯಾಣಿಸು ತ್ತಿದ್ದಾತನಿಗೆ ಕೇಳಿದೆ- “ಎಷ್ಟು ನಿಮಿಷ ತಗೊಳ್ತಾನೆ; ಘಾಟ್ ಇಳಿಯಲಿಕ್ಕೇ? ಆತ 15 ನಿಮಿಷ ಸಾಕು” ಎಂದ. ಹತ್ತಲಿಕ್ಕೆ 25ರಿಂದ 30 ನಿಮಿಷ ಬೇಕು ಎಂದ. ಓಹ್! ಎಂದೆ.
ಮುಂದುವರೆಯವುದು...
Monday, November 1, 2010
54ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಸಪ್ನ ಬುಕ್ ಹೌಸ್ ನ ಪುಸ್ತಕಗಳ ಬಿಡುಗಡೆ
54ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ
ತಾ|| 01-11-2010 ರಂದು ಸಪ್ನಬುಕ್ ಹೌಸ್
54 ಮಕ್ಕಳ ಕನ್ನಡ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿತು.
ಇನ್ ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಖ್ಯಾತ ನ್ಯಾಯವಾದಿ ರಾಮಾಜೊಯಿಸ್ ಪುಸ್ತಕಗಳು ಮಕ್ಕಳಿಗೆ ಜ್ಞಾನ ಭಂಡಾರ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು, ಸಮಾಜ ನಿರ್ಮಾಣದಲ್ಲಿ ಮಕ್ಕಳ ಸಾಹಿತ್ಯ ಅತ್ಯಂತ ಪರಿಣಾಮಕಾರಿ ಎಂದು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಮಕ್ಕಳ ಸಾಹಿತ್ಯದ ಪ್ರಾಮುಖ್ಯತೆ ಕುರಿತು ಹೇಳಿದರು. ಚಿಕ್ಕಂದಿನಿಂದಲೇ ಮಾತೃಭಾಷೆಯಲ್ಲಿ ಶಿಕ್ಷಣ ಕೊಡುವುದು ಅತ್ಯವಶ್ಯವೆಂದೂ ಹೇಳಿದರು.
ಸುಧಾಮೂರ್ತಿ ಮಕ್ಕಳು ಕನ್ನಡದ ಬಗ್ಗೆ ಚಿಕ್ಕಂದಿನಿಂದಲೇ ಆಸಕ್ತಿ ಬೆಳೆಸಿಕೊಳ್ಳಬೇಕು, ಕಥೆಗಳು ಮಕ್ಕಳಿಗೆ ಸಾಹಿತ್ಯಾಸಕ್ತಿ ಮೂಡಿಸುತ್ತವೆ ಎಂದರು. ತಂದೆ ತಾಯಿಗಳೂ ಈ ಬಗ್ಗೆ ಗಮನ ಹರಿಸಬೇಕೆಂದರು. ಇಲ್ಲದಿದ್ದರೆ, ದೊಡ್ಡವರಾದಮೇಲೆ ಅವರಿಗೆ ಹೇಗೆ ಸಾಧ್ಯವೆಂದರು.


ಕನ್ನಡದ ರಾಷ್ಟ್ರ ಕವಿ ಜಿ.ಎಸ್.ಶಿವರುದ್ರಪ್ಪನವರು ಅಧ್ಯಕ್ಷತೆ ವಹಿಸಿದ್ದರು. ಕವಿ ಶಿವರುದ್ರಪ್ಪನವರು ಮಕ್ಕಳು ಮಾತೃಭಾಷೆ ಕನ್ನಡದಲ್ಲಿ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕೆಂದರೆ, ಕನ್ನಡ ಶಿಕ್ಷಣ 1 ರಿಂದ 10 ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕಾದ ತುರ್ತು ಅಗತ್ಯವಿದೆ. ಇದು ಜಾರಿಯಾಗದಿದ್ದರೆ ಕನ್ನಡಕ್ಕೆ ಉಳಿಗಾಳವಿಲ್ಲವೆಂದರು.
ಮಕ್ಕಳ ಸಾಹಿತ್ಯ ನಿರ್ಲಕ್ಷ್ಯಕ್ಕೊಳಗಾಗಿದೆ, ಸೃಜಶೀಲ ಬರಹಗಾರರು ಮಕ್ಕಳ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳಲ್ಲಿ ನೈತಿಕತೆ ಮಾನವೀಯತೆಗೆ ಬೆಳೆಯಲು ಮಕ್ಕಳ ಸಾಹಿತ್ಯ ಸಹಕಾರಿ. ಪಂಚೆ ಮಂಗೇಶರಾಯರು, ಜಿ.ಪಿ.ರಾಜರತ್ನಂ, ಶಿವರಾಮ ಕಾರಂತ ಮುಂತಾದ ಹಿರಿಯರು ಮಕ್ಕಳಿಗಾಗಿ ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಸ್ಮರಿಸಿದರು.
54 ಮಂದಿ ಶಾಲಾ ಮಕ್ಕಳಿಗೆ (ಪ್ರತಿಯೊಂದು ಪುಸ್ತಕವೂ 54 ಪುಟಗಳು) ವೇದಿಕೆಯ ಮೇಲೆ ಕರೆದು ಪುಸ್ತಕ ವಿತರಣೆ ಮಾಡಿದ್ದು ಒಂದು ವಿಶೇಷ.
ಸಮಾರಂಭದಲ್ಲಿ ಸಾಹಿತಿಗಳಾದ ಸಾ.ಶಿ.ಮರುಳಯ್ಯ, ಕವಿ ಸುಮತೀಂದ್ರನಾಡಿಗ್, ರಾಜಶೇಖರ ಭೂಸನೂರ ಮಠ, ಸು. ರುದ್ರಮೂರ್ತಿ ಶಾಸ್ತ್ರಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಬರೀ ನೆರೆತ ತಲೆಗಳಿಂದ ಹೆಚ್ಚು ತುಂಬಿದ್ದ ಸಮಾರಂಭವು ಕಳೆದ ತಲೆಮಾರಿನಲ್ಲಿ ಯುವ ಪೀಳಿಗೆಯಿಂದ ಕಿಕ್ಕಿರಿದು ತುಂಬಿರುತ್ತಿದ್ದ ಇಂತಹ ಸಮಾರಂಭಗಳನ್ನು ಸ್ಮರಿಸಿ ಕೊಳ್ಳುವಂತಿತ್ತು.
ಸಮಾರಂಭದ ಕೊನೆಯಲ್ಲಿ ಸಪ್ನ ಕನ್ನಡ ವಿಭಾಗದ ಮುಖ್ಯಸ್ಥರಾದ ದೊಡ್ಡೇಗೌಡರು ವಂದನಾರ್ಪಣೆ ಮಾಡಿದರು.
ತಾ|| 01-11-2010 ರಂದು ಸಪ್ನಬುಕ್ ಹೌಸ್
54 ಮಕ್ಕಳ ಕನ್ನಡ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿತು.
ಇನ್ ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಖ್ಯಾತ ನ್ಯಾಯವಾದಿ ರಾಮಾಜೊಯಿಸ್ ಪುಸ್ತಕಗಳು ಮಕ್ಕಳಿಗೆ ಜ್ಞಾನ ಭಂಡಾರ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು, ಸಮಾಜ ನಿರ್ಮಾಣದಲ್ಲಿ ಮಕ್ಕಳ ಸಾಹಿತ್ಯ ಅತ್ಯಂತ ಪರಿಣಾಮಕಾರಿ ಎಂದು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಮಕ್ಕಳ ಸಾಹಿತ್ಯದ ಪ್ರಾಮುಖ್ಯತೆ ಕುರಿತು ಹೇಳಿದರು. ಚಿಕ್ಕಂದಿನಿಂದಲೇ ಮಾತೃಭಾಷೆಯಲ್ಲಿ ಶಿಕ್ಷಣ ಕೊಡುವುದು ಅತ್ಯವಶ್ಯವೆಂದೂ ಹೇಳಿದರು.
ಸುಧಾಮೂರ್ತಿ ಮಕ್ಕಳು ಕನ್ನಡದ ಬಗ್ಗೆ ಚಿಕ್ಕಂದಿನಿಂದಲೇ ಆಸಕ್ತಿ ಬೆಳೆಸಿಕೊಳ್ಳಬೇಕು, ಕಥೆಗಳು ಮಕ್ಕಳಿಗೆ ಸಾಹಿತ್ಯಾಸಕ್ತಿ ಮೂಡಿಸುತ್ತವೆ ಎಂದರು. ತಂದೆ ತಾಯಿಗಳೂ ಈ ಬಗ್ಗೆ ಗಮನ ಹರಿಸಬೇಕೆಂದರು. ಇಲ್ಲದಿದ್ದರೆ, ದೊಡ್ಡವರಾದಮೇಲೆ ಅವರಿಗೆ ಹೇಗೆ ಸಾಧ್ಯವೆಂದರು.


ಕನ್ನಡದ ರಾಷ್ಟ್ರ ಕವಿ ಜಿ.ಎಸ್.ಶಿವರುದ್ರಪ್ಪನವರು ಅಧ್ಯಕ್ಷತೆ ವಹಿಸಿದ್ದರು. ಕವಿ ಶಿವರುದ್ರಪ್ಪನವರು ಮಕ್ಕಳು ಮಾತೃಭಾಷೆ ಕನ್ನಡದಲ್ಲಿ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕೆಂದರೆ, ಕನ್ನಡ ಶಿಕ್ಷಣ 1 ರಿಂದ 10 ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕಾದ ತುರ್ತು ಅಗತ್ಯವಿದೆ. ಇದು ಜಾರಿಯಾಗದಿದ್ದರೆ ಕನ್ನಡಕ್ಕೆ ಉಳಿಗಾಳವಿಲ್ಲವೆಂದರು.
ಮಕ್ಕಳ ಸಾಹಿತ್ಯ ನಿರ್ಲಕ್ಷ್ಯಕ್ಕೊಳಗಾಗಿದೆ, ಸೃಜಶೀಲ ಬರಹಗಾರರು ಮಕ್ಕಳ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳಲ್ಲಿ ನೈತಿಕತೆ ಮಾನವೀಯತೆಗೆ ಬೆಳೆಯಲು ಮಕ್ಕಳ ಸಾಹಿತ್ಯ ಸಹಕಾರಿ. ಪಂಚೆ ಮಂಗೇಶರಾಯರು, ಜಿ.ಪಿ.ರಾಜರತ್ನಂ, ಶಿವರಾಮ ಕಾರಂತ ಮುಂತಾದ ಹಿರಿಯರು ಮಕ್ಕಳಿಗಾಗಿ ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಸ್ಮರಿಸಿದರು.
54 ಮಂದಿ ಶಾಲಾ ಮಕ್ಕಳಿಗೆ (ಪ್ರತಿಯೊಂದು ಪುಸ್ತಕವೂ 54 ಪುಟಗಳು) ವೇದಿಕೆಯ ಮೇಲೆ ಕರೆದು ಪುಸ್ತಕ ವಿತರಣೆ ಮಾಡಿದ್ದು ಒಂದು ವಿಶೇಷ.
ಸಮಾರಂಭದಲ್ಲಿ ಸಾಹಿತಿಗಳಾದ ಸಾ.ಶಿ.ಮರುಳಯ್ಯ, ಕವಿ ಸುಮತೀಂದ್ರನಾಡಿಗ್, ರಾಜಶೇಖರ ಭೂಸನೂರ ಮಠ, ಸು. ರುದ್ರಮೂರ್ತಿ ಶಾಸ್ತ್ರಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಬರೀ ನೆರೆತ ತಲೆಗಳಿಂದ ಹೆಚ್ಚು ತುಂಬಿದ್ದ ಸಮಾರಂಭವು ಕಳೆದ ತಲೆಮಾರಿನಲ್ಲಿ ಯುವ ಪೀಳಿಗೆಯಿಂದ ಕಿಕ್ಕಿರಿದು ತುಂಬಿರುತ್ತಿದ್ದ ಇಂತಹ ಸಮಾರಂಭಗಳನ್ನು ಸ್ಮರಿಸಿ ಕೊಳ್ಳುವಂತಿತ್ತು.
ಸಮಾರಂಭದ ಕೊನೆಯಲ್ಲಿ ಸಪ್ನ ಕನ್ನಡ ವಿಭಾಗದ ಮುಖ್ಯಸ್ಥರಾದ ದೊಡ್ಡೇಗೌಡರು ವಂದನಾರ್ಪಣೆ ಮಾಡಿದರು.
Subscribe to:
Posts (Atom)





